Wednesday, July 9, 2025

ಕೊಡಂಗೆ ಪ್ರಾಥಮಿಕ ಶಾಲೆ, ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲಾ ವಾರ್ಷಿಕೋತ್ಸವ

ಬಂಟ್ವಾಳ: ಕೊಡಂಗೆ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ, ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ಹಾಗೂ ಕೊಡಂಗೆ ಎಸ್‌ಡಿಎಂಸಿ, ಪರ್ಲಿಯಾ ಎಜುಕೇಶನ್ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಕೊಡಂಗೆ ಶಾಲಾ ವಾರ್ಷಿಕೋತ್ಸವ ಶನಿವಾರ ನಡೆಯಿತು.
ಪರ್ಲಿಯಾ ಎಜುಕೇಶನ್ ಟ್ರಸ್ಟ್‌ನ ಸಂಚಾಲಕ ಸತ್ತಾರ್ ಶಾಲಾ ಧ್ವಜಾರೋಹಣ ನೆರವೇರಿಸಿದರು. ಪುರಸಭಾ ಸದಸ್ಯ ಮುಹಮ್ಮದ್ ನಂದರಬೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಶಾಹುಲ್ ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ. ರಮಾನಾಥ ರೈ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವೇದಿಕೆಯಲ್ಲಿ ಪುರಸಭಾ ಸದಸ್ಯ ಲುಕ್ಮಾನ್, ಸಿಆರ್‌ಪಿ ಉಷಾ ಸುವರ್ಣ, ಮುಹಮ್ಮದ್ ಡಿ., ಪಿ.ಎ. ರಹೀಂ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿ.ಎಂ. ಇಸ್ಮಾಯಿಲ್, ಮುಖ್ಯೋಪಾಧ್ಯಾಯಿನಿ ಸೋನಿತ ಕೆ., ಟ್ರಸ್ಟ್ನ ಗೌರವಾಧ್ಯಕ್ಷ ಹಂಝ ಪರ್ಲಿಯಾ, ನೇತಾಜಿ ಸುಭಾಶ್ಚಂದ್ರ ಶಾಲೆಯ ಮುಖ್ಯೋಪಾಧಾಯಿನಿ ಉಮಾವತಿ, ಕಾರ್ಯಾಧ್ಯಕ್ಷ ಸುರೇಶ್, ವಿದ್ಯಾರ್ಥಿನಾಯಕಿ ಫಾತಿಮ ಸಫ, ನಾಯಕ ಮುಹಮ್ಮದ್ ಅಝೀಂ ಹಾಜರಿದ್ದರು. ಶಾಲಾ ಮುಖ್ಯ ಶಿಕ್ಷಕಿ ವರದಿ ವಾಚಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕಿ ಶಶಿಕಲಾ ಕೆ.ಎನ್. ಸ್ವಾಗತಿಸಿ, ಮುಖ್ಯ ಶಿಕ್ಷಕಿ ರಮಣಿ ಮೋಹನ್ ವಂದಿಸಿದರು. ಅಶ್ರಫ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...