Monday, January 26, 2026

ದ.ಕ. ಜಿಲ್ಲೆಯಲ್ಲಿ ಅ.15ರ ಬಳಿಕ ಹಂತ ಹಂತವಾಗಿ ಶಾಲೆ-ಕಾಲೇಜುಗಳು ತೆರೆಯಲು ನಿರ್ಧಾರ : ಡಿಸಿ ಡಾ. ರಾಜೇಂದ್ರ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಅಕ್ಟೋಬರ್ 15ರ ಬಳಿಕ ಹಂತ ಹಂತವಾಗಿ ಶಾಲಾ-ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ತೆರೆದುಕೊಳ್ಳಲು ಅವಕಾಶವಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಅಕ್ಟೋಬರ್ 15ರ ನಂತರ ಶಾಲಾ-ಕಾಲೇಜುಗಳನ್ನು ಪುನರಾರಂಭಗೊಳಿಸಲು ಹಂತ-ಹಂತವಾಗಿ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಸಂಬಂಧಪಟ್ಟ ಶಾಲೆ-ಕಾಲೇಜುಗಳು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಅವುಗಳ ಆಧಾರದ ಮೇಲೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಮುಖಾಂಶಗಳು:

  • ಆನ್ ಲೈನ್, ದೂರಶಿಕ್ಷಣಕ್ಕೆ ಆದ್ಯತೆಯ ಅನುಸಾರ ಅನುಮತಿ ಮುಂದುವರಿಸಬೇಕಾಗಿದೆ
  • ಕೆಲವು ವಿದ್ಯಾರ್ಥಿಗಳು ಆನ್ ಲೈನ್ ಶಿಕ್ಷಣ ಬಯಸಿದ್ದಲ್ಲಿ ಅದಕ್ಕೆ ಅನುಮತಿ ನೀಡುವುದು
  • ತಂದೆ-ತಾಯಿ, ಪೋಷಕರ ಲಿಖಿತ ಅನುಮತಿಯೊಂದಿಗೆ ಮಾತ್ರವೇ ಶಾಲೆಗಳಿಗೆ /ಸಂಸ್ಥೆಗಳಿಗೆ ಹಾಜರಾಗಬಹುದು
  • ಶಿಕ್ಷಣ ಸಂಸ್ಥೆಗಳು ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು
  • ಸಂಪೂರ್ಣವಾಗಿ ಪೋಷಕರ ಅನುಮತಿಯ ಮೇಲೆ ಅವಲಂಬಿತವಾಗಿರಬೇಕು
  • ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಬೇಕು
  • ಸ್ಥಳೀಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ ಪಾಲಿಸಬೇಕು

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...