Monday, February 10, 2025

ಶಾಲಾ ಮಕ್ಕಳ ಖಾಸಗಿ ಟೆಂಪೋ ಚಾಲಕಮಾಲಕರಿಂದ ಜುಲೈ11 ಮತ್ತು 12 ಕ್ಕೆ ಸಾಂಕೇತಿಕ ಮುಷ್ಕರ

ಶಾಲಾ ಮಕ್ಕಳ ಖಾಸಗಿ ವಾಹನ ಚಾಲಕ ಮತ್ತು ಮಾಲಕರ ಸಂಘ ದ.ಕ ಬಂಟ್ವಾಳ ಇವರ ವತಿಯಿಂದ ಶಾಲಾ ಮಕ್ಕಳ ಸಂಚಾರಕ್ಕೆ ಕಾನೂನಿನ ಪ್ರಕಾರ ನಿಯಮಗಳನ್ನು ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿ ನಾಳೆಯಿಂದ ಎರಡು ದಿನಗಳ ಕಾಲ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಲಿದೆ ಎಂದು ಟೆಂಪೋ ಮಾಲಕ ಚಾಲಕರ ಸಂಘದ ಅಧ್ಯಕ್ಷ ಸದಾನಂದ ನಾವೂರ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕು ಶಾಲಾ ಮಕ್ಕಳ ವಾಹನ ಚಾಲಕರು ಹಾಗೂ ಮಾಲಕರಿಗೆ ಪೊಲೀಸ್ ಇಲಾಖೆ ಕೋರ್ಟ್ ಅದೇಶದ ನೆಪದಲ್ಲಿವಾಹನ ತಪಾಸಣೆ ಮಾಡಿ ನಿಲ್ಲಿಸುತ್ತಿದ್ದಾರೆ. ಇದರಿಂದ ಶಾಲೆಗೆ ಮಕ್ಕಳನ್ನು ಮುಟ್ಟಿಸುವಾಗ ತಡವಾಗುತ್ತದೆ .ಅದಲ್ಲದೆ ಚಾಲಕರ ಲೈಸನ್ಸ್ ಮುಟ್ಟು ಗೋಲು ಹಾಕಿ, ವಾಹನ ದ ಮೇಲೆ ಕೇಸ್ ದಾಖಲಿಸಿ ನಮಗೆ ರೂ 2000 ದಿಂದ 5000 ವರೆಗೆ ಕೋರ್ಟ್ ದಂಡ ಹಾಕುತ್ತಿದ್ದಾರೆ. ಇದರಿಂದ ಶಾಲಾ ಮಕ್ಕಳನ್ನು ನಮಗೆ ಶಾಲೆಗೆ ಕರೆದುಕೊಂಡು ಹೋಗಲು ಕಷ್ಷವಾಗುತ್ತಿದೆ ಎಂದು ಶಾಲಾ ಮಕ್ಕಳ ವಾಹನ ಚಾಲಕರ ಅಳಲು.

ನಮಗೆ ಶಾಲಾ ಮಕ್ಕಳನ್ನು ವಾಹನ ಮಿತಿಯ ಎರಡು ಪಟ್ಟು ಕರೆದುಕೊಂಡು ಹೋಗಲು ಅನುಮತಿ ನೀಡುವಂತೆ ಅಗ್ರಹಿಸಿ ಬಂಟ್ವಾಳ ಖಾಸಗಿ ಶಾಲಾ ಮಕ್ಕಳ ವಾಹನ ವನ್ನು ಜುಲೈ 11 ಗುರುವಾರ ಹಾಗೂ ಜುಲೈ 12 ಶುಕ್ರವಾರ ದಂದು ನಮ್ಮ ವಾಹನಗಳನ್ನು ನಿಲ್ಲಿಸಲು ನಿರ್ದರಿಸಿದ್ದೇವೆ. ಇದಕ್ಕೆ ಬಂಟ್ವಾಳ ತಾಲೂಕಿನ ಎಲ್ಲಾ ಶಾಲಾ ವಾಹನ ಚಾಲಕ , ಮಾಲಿಕರು ಹಾಗೂ ಮಕ್ಕಳ ಪೋಷಕರು ಸಹಕರಿಸಬೇಕಾಗಿ ವಿನಂತಿಯನ್ನು ಮಾಲೀಕರು ತಿಳಿಸಿದ್ದಾರೆ.
ಮಂಗಳೂರು ಶಾಲಾ ಮಕ್ಕಳ ವಾಹನ ಚಾಲಕರು ಅನಿರ್ದಿಷ್ಟವಾದಿ ಮುಷ್ಕರವನ್ನು ಕೈಗೊಂಡಿದ್ದು ಇದಕ್ಕೆ ಬಂಟ್ವಾಳ ದ ಶಾಲಾ ಮಕ್ಕಳ ವಾಹನ ಚಾಲಕರ ಬೆಂಬಲ ಘೋಷಿಸಿದೆ.
ಪೋಲೀಸರ ಈಕ್ರಮದಿಂದ ಸಾಕಷ್ಟು ತೊಂದರೆ ಯಾಗುತ್ತಿದ್ದು ಈ ಬಗ್ಗೆ ನಿಯಮದಲ್ಲಿ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿ
ನಾಳೆ ಜುಲೈ 11 ರಂದು ಬೆಳಿಗ್ಗೆ 10ಗಂಟೆಯ ವೇಳೆ ಬಿಸಿರೋಡಿನ ಲ್ಲಿ ಎ.ಎಸ್. ಪಿ.ಸೈದುಲು ಅಡಾವತ್ ತಹಶೀಲ್ದಾರ್ ರಶ್ಮಿ ಅವರಿಗೆ ಮನವಿ ಮಾಡಲಾಗುವುದು ಎಂದು ಟೆಂಪೋ ಚಾಲಕಮಾಲಕರ ಸಂಘದ ಅಧ್ಯಕ್ಷ ಸದಾನಂದ ನಾವೂರ ತಿಳಿಸಿದ್ದಾರೆ.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...