Wednesday, February 12, 2025

ವಿವಿಧ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಒತ್ತಾಯ ಎಸ್ಡಿಪಿಐ ಮಂಚಿ ವಲಯ ಸಮಿತಿ ವತಿಯಿಂದ ಮನವಿ

ಬಂಟ್ವಾಳ: ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಎಸ್ಡಿಪಿಐ ಮಂಚಿ ವಲಯ ಸಮಿತಿ ವತಿಯಿಂದ ಶುಕ್ರವಾರ ಪಂಚಾಯತ್ ಅಭಿವೃದ್ಧಿ ಅವರಿಗೆ ಮನವಿ ಸಲ್ಲಿಸಲಾಯಿತು.
ಹೆಗಡೆ ರಸ್ತೆ ದುರಸ್ತಿ, ಕುಕ್ಕಾಜೆ ಜಂಕ್ಷನ್‌ನಲ್ಲಿ ಹೊಸ ಶೌಚಾಲಯ ನಿರ್ಮಾಣ, ಚೆಕ್‌ಪೋಸ್ಟ್ ಬಳಿ ಹೈಮಾಸ್ಕ್ ಸೋಲಾರ್ ಅಳವಡಿಕೆ ಹಾಗೂ ಕೆಟ್ಟುಹೋದ ದಾರಿ ದೀಪಗಳನ್ನು ಸರಿಪಡಿಸುವಂತೆ ಮನವಿ ಮೂಲಕ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಂಚಿ ಹೋರಾಟ ಸಮಿತಿ ಅಧ್ಯಕ್ಷ ನವಾಜ್ ಕೋಡಿಬೈಲ್, ಎಸ್ಡಿಪಿಐ ಮಂಚಿ ವಲಯ ಸಮಿತಿ ಅಧ್ಯಕ್ಷ ಫೈಝಲ್ ಮಂಚಿ, ಕಾರ್ಯದರ್ಶಿ ಜಬ್ಬಾರ್ ಮಂಚಿ, ಸಮಾಜಿಕ ಕಾರ್ಯಕರ್ತ ಕುಕ್ಕಾಜೆ ಮೋನು, ಸುಫೈದ್ ಕುಕ್ಕಾಜೆ, ಶರೀಫ್ ಕುಕ್ಕಾಜೆ, ಹಾರೂನ್ ಕುಕ್ಕಾಜೆ, ಡಿ.ಎನ್. ಫಾರೂಕ್ ಮಂಚಿ ಹಾಜರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...