Tuesday, January 27, 2026

ಶರತ್ ಮಡಿವಾಳ ಹತ್ಯೆ ಆರೋಪಿ ನ್ಯಾಯಾಲಯಕ್ಕೆ ಶರಣಾಗತಿ

ಬಂಟ್ವಾಳ: ಆರ್.ಎಸ್.ಎಸ್.ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೋರ್ವ ಇಂದು ಬಿಸಿರೋಡಿನ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
2017 ಜುಲೈ 4 ರಂದು
ಶರತ್ ಮಡಿವಾಳ ಅವರ ಲಾಂಡ್ರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 10 ಗಂಟೆಗೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕತ್ತಿಯಿಂದ ಕಡಿದು ಪರಾರಿಯಾಗಿದ್ದರು.
ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ಶರತ್ ಮಡಿವಾಳ ಅವರನ್ನು
ಬಳಿಕ ಇವರ ಸ್ನೇಹಿತರು
ಸೇರಿ ಆಸ್ಪತ್ರೆ ಗೆ ದಾಖಲು ಮಾಡಿದ್ಧರೆ.
ಜೀವನ್ಮರಣ ಹೋರಾಟದಲ್ಲಿದ್ದ ಶರತ್ ಜುಲೈ 7 ರಂದು ಮ್ರತನಾಗಿದ್ದ.
ಶರತ್ ಹತ್ಯೆ ಯಲ್ಲಿ ಸಜೀಪ ನಿವಾಸಿ ಕಲಂದರ್ ನಿಶಾರ್ ನಂದಾವರ ನಿವಾಸಿ ಇಬ್ರಾಹಿಂ ಹಾಗೂ ಮಹಮ್ಮದ್ ಶರೀಫ್ ಅವರು ಪ್ರಮುಖ ಆರೋಪಿಗಳಾಗಿದ್ದರು.
ಇವರಲ್ಲಿ ಮಹಮ್ಮದ್ ಶರೀಫ್ ಅವರ ಜೊತೆ ಇವರಿಗೆ ಸಹಾಯ ಮಾಡಿದ 18 ಜನರ ನ್ನು ಸುದೀರ್ ರೆಡ್ಡಿ ಅವರ ನೇತ್ರತ್ವದಲ್ಲಿ ಬಂಧನ ಮಾಡಲಾಗಿತ್ತು.
ಉಳಿದಂತೆ ಪ್ರಮುಖ ಆರೋಪಿಗಳ ಪೈಕಿ ನಂದಾವರ ನಿವಾಸಿ ಇಬ್ರಾಹಿಂ ವಿದೇಶಕ್ಕೆ ಪರಾರಿಯಾಗಿದ್ದ ಸಜೀಪ ನಿವಾಸಿ ಕಲಂದರ್ ನಿಶಾರ್ ತಲೆಮರೆಸಿಕೊಂಡಿದ್ದ.
ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಕಲಂದರ್ ಕೊನೆಗೂ ನ್ಯಾಯಾಲಯಕ್ಕೆ ಇಂದು ಹಾಜರಾಗಿದ್ದಾನೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...