Thursday, February 13, 2025

ವಿಟ್ಲ: ತರಬೇತಿ ಶಿಬಿರ

ವಿಟ್ಲ: ವಿಟ್ಲ ಜೆಸಿಐ ವತಿಯಿಂದ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಣಾಮಕಾರಿ ಭಾಷಣ ಕಲೆ ಪ್ರೇರಣಾ ಐಡಿ ಟ್ರೈನಿಂಗ್ ತರಬೇತಿ ಶಿಬಿರ ನಡೆಸಲಾಯಿತು. ಈ ಕಾರ್‍ಯಕ್ರಮವನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಲ್.ಎನ್ ಕೂಡೂರು ಉದ್ಘಾಟಿಸಿದರು.
ಜೆಸಿಐ ವಲಯ 15 ರ ಉಪಾಧ್ಯಕ್ಷ ರಾಯನ್ ಉದಯ ಕ್ರಾಸ್ತಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಕೃಷ್ಣಮೂರ್ತಿ ಮತ್ತು ವಲಯ ತರಬೇತುದಾರ ಎಸ್.ಜಿ ಭಟ್ ತರಬೇತಿ ನಡೆಸಿಕೊಟ್ಟರು. ಜೆಸಿಐ ವಿಟ್ಲದ ಪೂರ್ವಾಧ್ಯಕ್ಷರುಗಳಾದ ಬಾಬು ಕೆ.ವಿ ಮತ್ತು ಸೋಮಶೇಖರ್, ಜೇಸಿರೆಟ್ ಅಧ್ಯಕ್ಷೆ ಮಲ್ಲಿಕಾ ಉಪಸ್ಥಿತರಿದ್ದರು.
ಮೋಹನ್ ಪ್ರಸ್ತಾವಿಸಿದರು. ಅಧ್ಯಕ್ಷ ಬಾಲಕೃಷ್ಣ ವಿಟ್ಲ ಸ್ವಾಗತಿಸಿದರು. ಕಾರ್‍ಯದರ್ಶಿ ಸಂದೀಪ್ ವಂದಿಸಿದರು. ಜೇಸನ್ ಪಿಂಟೊ ಮತ್ತು ಜೈಕಿಶನ್ ಕಾರ್‍ಯಕ್ರಮ ನಿರೂಪಿಸಿದರು. ಅಣ್ಣಪ್ಪ ಸಾಸ್ತಾನ ಸಹಕರಿಸಿದರು. 35 ಜನ ಈ ಶಿಬಿರದಲ್ಲಿ ಸದಸ್ಯರು ಭಾಗವಹಿಸಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...