Saturday, January 31, 2026

ಅರ್ಕುಳದಲ್ಲಿ ರಜಾಶಿಬಿರ ವಿಕಾಸ-2019 ವಿಕಾಸ ಶಿಬಿರ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ: ಡಾ. ಜಯಕುಮಾರ ಶೆಟ್ಟಿ

ಬಂಟ್ವಾಳ: ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗಿಸಿಕೊಳ್ಳಬೇಕು. ರಜಾಕಾಲದ ಶಿಬಿರಗಳು ಮಕ್ಕಳ ಮಾನಸಿಕ ವಿಕಸನವನ್ನು ಮಾಡುವುದರೊಂದಿಗೆ ಅಗತ್ಯ ಸಾಮಾಜಿಕ ಜಾಗೃತಿ ಹಾಗೂ ಜೀವನ ಶಿಕ್ಷಣವನ್ನು ನೀಡುತ್ತದೆ ಎಂದು ಅರ್ಕುಳ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಅರ್ಕುಳ ಬೀಡು ಜಯಕುಮಾರ ಶೆಟ್ಟಿ ತಿಳಿಸಿದರು.
ಡಾ.ಜಯಕುಮಾರ ಶೆಟ್ಟಿ ಅವರು ಇತ್ತೀಚೆಗೆ ಅರ್ಕುಳ ಚಾರಿಟೇಬಲ್ ಟ್ರಸ್ಟಿನ ಆಶ್ರಯದಲ್ಲಿ ಸ್ಥಳೀಯ ದ್ವಾರ ಸಮಿತಿ ಹಾಗೂ ಶ್ರೀ ದೇವಿ ಬಯಲಾಟ ಸಮಿತಿಯ ಸಹಯೋಗದೊಂದಿಗೆ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಆವರಣದಲ್ಲಿ ಆಯೋಜಿಸಿದ ರಜಾಕಾಲದ ಶಿಬಿರ ’ವಿಕಾಸ-2019’ ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯತರಬೇತಿದಾರ ಮಂಜು ವಿಟ್ಲ ಅವರು ಮಾತನಾಡುತ್ತಾ ರಜಾಕಾಲದ ಶಿಬಿರಗಳು ಮಕ್ಕಳಲ್ಲಿ ಉತ್ತಮ ಆಸಕ್ತಿಗಳನ್ನು ಬೆಳೆಸುವುದರೊಂದಿಗೆ ಬುದ್ಧಿಯ ವಿಕಾಸಕ್ಕೆ ಪೂರಕವಾಗಿದೆ.ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ಪರಿಸರವನ್ನು ಒದಗಿಸುವ ಬೇಸಿಗೆ ಶಿಬಿರಗಳು ಅತೀ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಅರ್ಕುಳ ಅಡ್ಯಾರ್‌ಗ್ರಾಮ ಪಂಚಾಯತ್‌ ಉಪಾದ್ಯಕ್ಷೆ  ಆಶಾ ಪ್ರಕಾಶ್, ಸದಸ್ಯರಾದ ಪವಿತ್ರಾ ಹಾಗೂ  ಸಂತೋಷ್‌ ತುಪ್ಪೆಕಲ್ಲು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸ್ಥಳೀಯ 69 ಮಕ್ಕಳು ಭಾಗವಹಿಸಿದ್ದರು.ಈ ಶಿಬಿರದಲ್ಲಿ ಮಕ್ಕಳಿಗೆ ರಂಗ ಕಲೆ, ಭಾಷಣ ಕಲೆ, ಗುಂಪು ಚಟುವಟಿಕೆಗಳು, ಜೀವನ ಮೌಲ್ಯಗಳುಹಾಗೂ ಪೌರತ್ವದಬಗ್ಗೆ ತರಬೇತಿ ನೀಡಲಾಯಿತು. ವಿಕಾಸ ಶಿಬಿರದಲ್ಲಿ ಬಿಎಸ್‌ಎನ್‌ಎಲ್ ಮಾರುಕಟ್ಟೆ ಅಧಿಕಾರಿ ಕಂಪ ಸದಾನಂದ ಆಳ್ವ, ಮಂಟಮೆ ದಿನಕರ ಕರ್ಕೇರಾ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ,  ಆಶಾ, ಶೋಭಾ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

More from the blog

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...