Wednesday, January 28, 2026

ಧರ್ಮಸ್ಥಳ ಶಾಲೆಯಲ್ಲೊಂದು ವಿನೂತನ ಪ್ರಯೋಗ: ಕಾರ್ಮಿಕರ ಮಕ್ಕಳಿಗಾಗಿ ವಿಶೇಷ ಶಿಬಿರ

ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸುಪ್ರಿಯಾ ಹರ್ಷೇಂದ್ರ ಕುಮಾರ್ ನಿರ್ದೇಶನದಂತೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ವಲಸೆ ಬಂದ ಕಾರ್ಮಿಕರ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸಿ ಅವರ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಶಿಬಿರವನ್ನು ನಡೆಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಎಂ.ವಿ. ಪರಿಮಳಾ ನೇತೃತ್ವದಲ್ಲಿ ಶಾಲಾ ಶಿಕ್ಷಕರು, ಶಿಕ್ಷಕಿಯರು ಸಂಘಟಿತರಾಗಿ ಶಿಬಿರವನ್ನು ಯೋಜಿಸಿದರು.
ಕಲಿಕೆ ಕಷ್ಟವಾಗಬಾರದು. ಇಷ್ಟವಾಗಬೇಕು. ಶಿಕ್ಷಣ ಶಿಕ್ಷೆ ಆಗದೆ ಸಂತಸದಾಯಕ ಕಲಿಕೆಯಾಗಬೇಕು. ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ. ಈ ಉದ್ದೇಶದಿಂದ ಶಿಬಿರದಲ್ಲಿ ಶಿಸ್ತು, ಸಂಯಮ, ಸಮಯ ಪಾಲನೆ, ಮಾನವೀಯ ಮೌಲ್ಯಗಳ ಉದ್ದೀಪನ, ನೈತಿಕತೆ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಸಾಮರಸ್ಯದ ಜೀವನ, ಇತ್ಯಾದಿಗಳ ಬಗ್ಯೆ ಸಂಪನ್ಮೂಲ ವ್ಯಕ್ತಿಗಳು ವಿಶೇಷ ತರಬೇತಿ ನೀಡಿದರು.
ಮಂಗಳವಾರ ಶಿಬಿರಕ್ಕೆ ಭೇಟಿ ನೀಡಿದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಶಿಬಿರದ ಚಟುವಟಿಕೆಗಳ ಬಗ್ಯೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಶಿಬಿರದ ಸವಿವರ ಮಾಹಿತಿ ನೀಡಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...