Thursday, February 13, 2025

ಬೇಸಿಗೆ ಶಿಬಿರದ ಸಮಾರೋಪ

ಬಂಟ್ವಾಳ : ಮಕ್ಕಳಿಗೆ ಸೂಕ್ತವಾದ ವೇದಿಕೆಗಳು ಸಿಕ್ಕಾಗ ಅವರಲ್ಲಿ ಅಡಗಿದ ಪ್ರತಿಬೆಗಳು ಅನಾವರಣಗೊಳ್ಳುತ್ತದೆ, ಅಂತಹ ಅವಕಾಶಗಳನ್ನು ನಾವು ಮಾಡಿಕೊಡಬೇಕಾಗಿದೆ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹೇಳಿದರು.

ಅವರು ರಾಜ್ಯ ಬಾಲಭವನ ಸೊಸೈಟಿ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧೊ ಇಲಾಖೆ ಹಾಗೂ ಶಿಶುಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬಿ.ಸಿ.ರೋಡ್ ಸ್ತ್ರೀಶಕ್ತಿ ಭವನದಲ್ಲಿ ಮೇ 8ರಿಂದ18 ರವರೆಗೆ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರ ವಿವಿಧ ರೀತಿಯ ಯೋಜನೆಗಳನ್ನು ಮಕ್ಕಳ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆ ದೃಷ್ಟಿಯಿಂದ ಹಮ್ಮಿಕೊಂಡಿದೆ. ಅದರಲ್ಲಿ ಸಿ.ಡಿ.ಪಿ.ಒ.ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಬೇಸಿಗೆ ಶಿಬಿರವೂ ಒಂದು ಎಂದು ಅವರು ಹೇಳಿದರು.

ತಾ.ಪಂನ ಸಹಾಯಕ ನಿರ್ದೇಶಕ ಪ್ರಶಾಂತ್, ಕಛೇರಿ ವ್ಯವಸ್ಥಾಪಕಿ ಶಾಂಭವಿ, ಕೃಷಿ ಇಲಾಖೆಯ ಆತ್ಮಯೋಜನೆಯ  ಪ್ರಿಯಾಂಕ, ಸಂಪನ್ಮೂಲ ವ್ಯಕ್ತಿಗಳಾದ ಮೌನೇಶ್ ವಿಶ್ವಕರ್ಮ,  ಮುರಳಿಕೃಷ್ಣ ರಾವ್, ಹಿರಿಯ ಮೇಲ್ವಿಚಾರಕಿ ಬಿ.ಭಾರತಿ ವೇದಿಕೆಯಲ್ಲಿ  ಉಪಸ್ಥಿತರಿದ್ದರು. ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಮೇಲ್ವಿಚಾರಕಿಯರಾದ ಸರೋಜಾಭಟ್ , ಸಿಂಧೂ ಮತ್ತಿತರರು ಸಹಕರಿಸಿದರು. ಶಿಬಿರಾರ್ಥಿ ಸಂಜನಾ ಸ್ವಾಗತಿಸಿದರು, ಶೇಷರಾಜ್ ವಂದಿಸಿದರು. ಕು.ಸಂಜನಾ ಭಟ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...