Sunday, February 1, 2026

ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ಹೆಚ್ಚಿಸುವ ಬಗ್ಗೆ ಮಾಹಿತಿ ಶಿಬಿರ

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆಶ್ರಯದಲ್ಲಿ ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ಹೆಚ್ಚಿಸುವ ಬಗ್ಗೆ ಮಾಹಿತಿ ಶಿಬಿರವನ್ನು ತುಂಬೆಯ ಬಿ. ಎ. ಪದವಿಪೂರ್ವ ಕಾಲೇಜು, ದೀಪಿಕಾ ಪ್ರೌಢಶಾಲೆ, ಮೊಡಂಕಾಪು ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಬಿ.ಮೂಡ ಇಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ತುಂಬೆಯ ಬಿ. ಎ. ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಂಗಾಧರ ಆಳ್ವ ರವರು ಮುಖ್ಯ ಅತಿಥಿಯಾಗಿ ಆಗಮಿಸಿ, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸುದಪಯೋಗಪಡಿಸಿಕೊಳ್ಳುವುದರೊಂದಿಗೆ ಇತರರಿಗೂ ಈ ಮಾಹಿತಿಗಳನ್ನು ಹಂಚಿ ದೇವರು ಕೊಟ್ಟ ಪ್ರಕೃತಿಯನ್ನು ಉಳಿಸುವ ನಿಟ್ಟಿಲ್ಲಿ ಈಗಿಂದಲೇ ಪ್ರಯತ್ನ ಆರಂಭಿಸೋಣ ಎಂದು ತಿಳಿಸಿದರು. ಜೇಸಿಐ ಅಧ್ಯಕ್ಷ ಹರ್ಷರಾಜ್ ಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರಖ್ಯಾತ ರಾಷ್ಟ್ರೀಯ ಜಲ ತಜ್ಞರಾz ಜೋಸೆಫ್ ಬಿ ಎಂ. ರೆಬೆಲ್ಲೋರವರ ಪರಿಚಯ ನೀಡಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಜಯರಾಜ್ ಎಸ್. ಬಂಗೇರ ರವರು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಜೇಸಿಐ ಉಪಾಧ್ಯಕ್ಷ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಯುವ ಜನ ಸೇವಾ ನಿರ್ದೇಶಕ ಷನ್‌ಫತ್ ಷರೀಫ್ ಉಪಸ್ಥಿತದ್ದರು.
ವೇಗವಾಗಿ ನಡೆಯುತ್ತಿರುವ ನಗರೀಕರಣದಿಂದಾಗಿ ಮನುಷ್ಯ ಇಂದು ಪ್ರಕೃತಿಯನ್ನು ನಾಶಗೊಳಿಸುತ್ತಿದ್ದಾನೆ. ಹಿಂದಿನ ಕಾಲದಲ್ಲಿ ಮಳೆ ನೀರನ್ನು ಭೂಮಿಯಲ್ಲಿ ಹಿಡಿದಿಡುತ್ತಿದ್ದ ಕೆರೆಗಳು, ತೋಡು ಕಟ್ಟೆಗಳು, ಬಾವಿಗಳು ಇಂದು ಮಾಯವಾಗುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದೊಂದು ದಿನ ಭೀಕರ ಬರಗಾಲ ಬರುವುದು ಖಚಿತ. ಈ ನಿಟ್ಟಿನಲ್ಲಿ ಯಾವ ರೀತಿ ಮಳೆ ನೀರು ಕೊಯ್ಲು ಮಾಡಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಬಹುದು ಎಂಬುದರ ಬಗ್ಗೆ ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿದ ಜೋಸೆಫ್ ಬಿ ಎಂ. ರೆಬೆಲ್ಲೋರವರು ಮಕ್ಕಳಿಗೆ ಮನದಟ್ಟವಾಗುವಂತೆ ವಿವರಿಸಿದರು.

 

More from the blog

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...

ಇಂದು ಕೇಂದ್ರ ಬಜೆಟ್ ಮಂಡನೆ..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಲಿದ್ದಾರೆ.ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಆರಂಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...