Monday, February 10, 2025

ಇಡ್ಕಿದು: ರೇಬಿಸ್ ಲಸಿಕಾ ಶಿಬಿರ

ವಿಟ್ಲ: ಇಡ್ಕಿದು ಪಂಚಾಯಿತಿ, ಪಶು ಸಂಗೋಪನಾ ಇಲಾಖೆ, ನಾನಾ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ವತಿಯಿಂದ 23 ನೇ ವರ್ಷದ ಹುಚ್ಚು ನಾಯಿ ನಿರೋಧಕ ಲಸಿಕಾ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಡಾ. ಕೃಷ್ಣ ಭಟ್ ಕೋಂಕೋಡಿ ಮಾತನಾಡಿ ೨೫ನೇ ವರ್ಷದ ಕಾರ್‍ಯಕ್ರಮವನ್ನು ರಾಜ್ಯ ಮಟ್ಟದ ಇಲಾಖಾಧಿಕಾರಿ, ಸೇವಾ ಸಂಸ್ಥೆಗಳ ಉನ್ನತ ಮಟ್ಟದ ಅಧಿಕಾರಿಗಳನ್ನು ಸೇರಿಸಿ ಮಾದರಿ ಕಾರ್‍ಯಕ್ರಮವನ್ನಾಗಿ ಮಾಡಬೇಕು ಎಂದರು.
ಗ್ರಾಮ ಪಂಚಾಯತ್ ವ್ಯಾಪ್ತಿಯ 23 ಕೇಂದ್ರಗಳಲ್ಲಿ ಶಿಬಿರವನ್ನು ಹಮ್ಮಿಕೊಂಡಿದ್ದು 366 ನಾಯಿಗಳಿಗೆ ಚುಚ್ಚುಮದ್ದು ನೀಡಲಾಯಿತು. ವಿಟ್ಲ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ಸುರೇಶ್ ಭಟ್ ಇವರ ನೇತೃತ್ವದಲ್ಲಿ ಡಾ.ಪರಮೇಶ್ವರ ನಾಕ್ ಪಶು ವೈದ್ಯಾಧಿಕಾರಿ ಅಡ್ಯನಡ್ಕ, ಜಾನುವಾರು ಅಭಿವೃದ್ದಿ ಅಧಿಕಾರಿಗಳಾದ ಕೃಷ್ಣಮೂರ್ತಿ ಜಿ, ಈಶ್ವರ ಭಟ್ ಕೆ, ಹಿರಿಯ ಪಶು ವೈದ್ಯಕೀಯ ಪರೀಕ್ಷಕರುಗಳಾದ ಮಂದಾರ ಜೈನ್, ಸುರೇಶ್ , ಕಿಶೋರ್, ಶೀನಪ್ಪ ಚುಚ್ಚುಮದ್ದು ನೀಡಿ ಸಹಕರಿಸಿದರು.
ಕಾರ್‍ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಚಂದ್ರಾವತಿ, ಸದಸ್ಯರುಗಳಾದ ಜಯರಾಮ ಕಾರ್‍ಯಾಡಿಗುತ್ತು, ಚಿದಾನಂದ ಪೆಲತ್ತಿಂಜ, ಸತೀಶ್ ಕೆಂರ್ದೆಲು, ಕೇಶವ ಉರಿಮಜಲು, ವಸಂತಿ, ಶಾರದಾ, ಜಗದೀಶ್ವರಿ, ಕಾರ್‍ಯದರ್ಶಿ ಅಜಿತ್ ಕುಮಾರ್, ಲೆಕ್ಕ ಸಹಾಯಕಿ ರಾಜೇಶ್ವರಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿಡಿಒ ಗೋಕುಲ್ ದಾಸ್ ಭಕ್ತ ಸ್ವಾಗತಿಸಿದರು. ಉಪಾಧ್ಯಕ್ಷರಾದ ಎಂ.ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರು ವಂದಿಸಿದರು. ಸಿಬ್ಬಂದಿಗಳಾದ ಸೂರಪ್ಪ, ಭವ್ಯ, ಸುನೀತಾ, ಸಾವಿತ್ರಿ , ಪೂರ್ಣೀಮಾ ಕೇಂದ್ರಗಳಲ್ಲಿ ಚುಚ್ಚುಮದ್ದು ನೀಡಲು ಸಹಕರಿಸಿದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...