Saturday, February 8, 2025

ಅಂಕುರ ಬೇಸಿಗೆ ಶಿಬಿರ

ಕಲ್ಲಡ್ಕ: ಅಬ್ದುಲ್ ಕಲಾಂರವರಲ್ಲಿ ಸಂತಸದ ಕ್ಷಣ ಯಾವುದು ಎಂದು ಕೇಳಿದಾಗ ಅಂಗವಿಕಲರ ಶಾಲೆಗೆ ಭೇಟಿನೀಡಿ ಅವರಿಗೆ ಹಗುರವಾದ ಕೃತಕ ಕಾಲುಗಳನ್ನು ನೀಡಿದುದು ತುಂಬಾ ಸಂತೋಷದಾಯಕವಾಗಿತ್ತು ಎಂದು ಕಲಾಂ ಹೇಳಿದರು. ಹಾಗೇಯೇ ನನಗೆ ಸಂತಸದ ಕ್ಷಣ ಯಾವುದೆಂದರೆ ಒಂದು- ತನ್ನ ಶಿಷ್ಯೆ ಮುಖ್ಯೋಪಾದ್ಯಾಯಿನಿ ಆಗಿದ್ದ ಶಾಲೆಗೆ ಭೇಟಿ ನೀಡಿದ್ದು, ಇನ್ನೊಂದು – ಈ ಶಾಲೆಯಲ್ಲಿ ಅಂಕುರ – ಬೇಸಿಗೆ ಶಿಬಿರದ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅತ್ಯಂತ ಸಂತಸದ ಕ್ಷಣವಾಗಿದೆ. ಎಂದು ಕಾರ್ಯಕ್ರಮದ ಉದ್ಘಾಟಕರಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸಂಕಪ್ಪ ಶೆಟ್ಟಿ ಹೇಳಿದರು.
ಮಾ.21ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರಲ್ಲಿ ಅಂಕುರ – ವಾರ್ಷಿಕ ಬೇಸಿಗೆ ಶಿಬಿರವನ್ನು ಅಂಕುರ ಎಂಬ ಹೆಸರೇ ಹೇಳುವಂತೆ ಮೊಳಕೆ ಬಂದ ಕಾಳುಗಳಿದ್ದ ದುಂಡನೆಯ ಪಾತ್ರೆಯ ಮುಚ್ಚಳವನ್ನು ತೆರೆಯುವುದರ ಮೂಲಕ ಉದ್ಘಾಟಿಸಲಾಯಿತು.


ಉದ್ಘಾಟನೆಯ ಮಾತನ್ನು ಮುಂದುವರಿಸುತ್ತಾ, ಈ ವಿದ್ಯಾಸಂಸ್ಥೆ ವಿಶ್ವದಲ್ಲಿಯೇ ಶ್ರೇಷ್ಠವಾದ ವಿದ್ಯಾಸಂಸ್ಥೆಯಾಗಿದೆ. ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳನ್ನು ಹೊಂದಿರುವುದು ಆಶ್ಚರ್‍ಯ ತಂದಿದೆ. ಇದಕ್ಕೆ ಕಾರಣ ಇಲ್ಲಿ ದೊರೆಯುವ ನೈಜ ಶಿಕ್ಷಣ. ಇತರ ಶಾಲೆಯಲ್ಲಿ ಸಿಗುವಂತಹುದು ಕೇವಲ ಔಪಚಾರಿಕ ಶಿಕ್ಷಣವಾಗಿದೆ. ನಿಮ್ಮ ಜೀವನ ಉನ್ನತಕ್ಕೆ ಒಯ್ಯುವ ಶಿಕ್ಷಣ ಇಲ್ಲಿ ದೊರೆಯುತ್ತದೆ. ಉನ್ನತ ಸ್ಥಾನಮಾನ ಅಂದರೆ ಅವನಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮುವುದು. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇವರ ಔದಾರ್‍ಯ, ಸಂಸ್ಕಾರ , ಒಳ್ಳೆಯ ಸದ್ಗುಣ ಅವರನ್ನು ಉನ್ನತ ಸ್ಥಾನಕ್ಕೆ ತಲುಪಿಸಿದೆ. ಅದಕ್ಕೆ ಇಂತಹ ಬೇಸಿಗೆ ಶಿಬಿರ ಪ್ರೇರಣೆಯಾಗಲಿ, ಒಳ್ಳೆಯ ವಿದ್ಯಾರ್ಥಿಗಳಾಗಿ, ಶಾಲೆಗೆ, ದೇಶಕ್ಕೆ ಕೀರ್ತಿ ತನ್ನಿ ಎಂದು ಹಾರೈಸಿದರು.
ನೀರು ಮತ್ತು ಗಾಳಿಯ ಸ್ಪರ್ಶವಾಗಿ ಮೊಳಕೆಯೊಡೆದ ಬೀಜಕ್ಕೆ ಸೂರ್‍ಯರಶ್ಮಿ ಬಿದ್ದಾಗ ಒಂದೊಳ್ಳೆ ಗಿಡವಾಗಿ ಹೇಗೆ ಪರಿಸರದಲ್ಲಿ ಬೆಳೆಯುತ್ತದೋ ಅದೇ ರೀತಿ ಮಕ್ಕಳಲ್ಲಿರುವ ಸುಪ್ತಪ್ರತಿಭೆ ನಮ್ಮ ಅಂಕುರ ಬೇಸಿಗೆ ಶಿಬಿರದ ಮೂಲಕ ಅನಾವರಣಗೊಳ್ಳಬೇಕೆಂಬುದು ಈ ಬೇಸಿಗೆ ಶಿಬಿರದ ಉದ್ದೇಶ. ಇದು ಸರಿಯಾಗಿ ಸಾಕಾರಗೊಳ್ಳಲಿ ಎಂಬುದು ನನ್ನ ಆಶಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಶ್ರೀಮಾನ್ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಾಂಬೂಲ ನೀಡಿ ಸಾಂಕೇತಿಕವಾಗಿ ಸ್ವಾಗತಿಸಲಾಯಿತು.೭ನೇ ತರಗತಿಯ ವಿದ್ಯಾರ್ಥಿಯಾದ ಕಾರ್ತಿಕ್ ಪ್ರೇರಣಾಗೀತೆ ಹಾಡಿದನು. ಒಟ್ಟು ಹಿರಿಯ ಮತ್ತು ಕಿರಿಯ ವಿಭಾಗದಿಂದ ೨೪ ತಂಡಗಳಾಗಿ ರಚನೆಮಾಡಿ ಆ ತಂಡಗಳಿಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರ ಹೆಸರನ್ನು ನೀಡಿದ್ದು ಆ ಗುಂಪುಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಶಿಕ್ಷಕರಾದ ರೇಷ್ಮಾ ನಿರೂಪಿಸಿ, ರೇಣುಕಾ ಸ್ವಾಗತಿಸಿ ಮತ್ತು ಶೈನಿ ವಂದಿಸಿದರು.

 

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...