Tuesday, January 27, 2026

ವಾಕ್ ಶ್ರವಣದೋಷ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಕಲ್ಲಡ್ಕ: ಪ್ರತಿಯೊಂದು ಮಗುವಿನಲ್ಲಿಯೂ ಉತ್ತಮ ಅಂಶಗಳಿದ್ದು ಅದನ್ನು ಕಾಣುವ ಮತ್ತು ಕಂಡುಹಿಡಿಯುವ ಮನಸ್ಸು ಮುಖ್ಯ ಯಾವುದೇ ಒಂದು ಸಾಧನೆಯನ್ನು ಅಂಕಗಳಿಂದ ಅಳಿಯುವುದು ಸರಿಯಲ್ಲ ವಿಶೇಷ ಅಗತ್ಯವುಳ್ಳ ಮಗುವಿನಲ್ಲೂ ಅಸಾಧಾರಣವಾದ ಸಾಧನೆಯನ್ನು ಮಾಡುವ ಛಲ ಇದೆ ಅದನ್ನು ಎಳವೆಯಲ್ಲಿ ಗುರುತಿಸಿ ಪ್ರೋತ್ಸಾಹ ನೀಡಿದಾಗ ಮತ್ತು ಆ ಸಾಧನೆಗೆ ನೀರು ಎರೆದಾಗ ಉತ್ತಮ ಫಲವನ್ನು ಕಂಡುಕೊಳ್ಳಲು ಸಾಧ್ಯ ವಿಶೇಷ ಅಗತ್ಯವುಳ್ಳ ಮಗು ಸಮಾಜದಲ್ಲಿ ಎಲ್ಲರ ಜೊತೆಗೆ ಬೆರೆಯುವ ಅವಕಾಶ ನೀಡಿ ಆ ಮಗು ಕೂಡ ಇತರ ಮಗುವಿನಂತೆ ಸುಂದರ ಬದುಕು ಕಾಣಲು ಸಮಾಜದ ಪ್ರೋತ್ಸಾಹ ಅತಿ ಅಗತ್ಯವಾಗಿದೆ ಎಂದು ಲಯನ್ಸ ಕ್ಲಬ್ ವಿಟ್ಲ ಇಲ್ಲಿನ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ ರವರು ಹೇಳಿದರು.

ಅವರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆ ಮಜಿ ವೀರಕಂಬ ಇಲ್ಲಿ ಶಿಕ್ಷಣ ಇಲಾಖೆ, ಲಯನ್ಸ್ ಕ್ಲಬ್ ವಿಟ್ಲ, ದಕ್ಷಿಣ ಕನ್ನಡ ಕದಳಿ ಮಹಿಳಾ ವೇದಿಕೆ ಹಾಗೂ ವಾಕ್ ಮತ್ತು ಶ್ರವಣ ವಿಭಾಗ ಯನೆಪೋಯ ಕಾಲೇಜು ಹಾಸ್ಪಿಟಲ್ ದೇರಳಕಟ್ಟೆ ಇದರ ಸಹಯೋಗದಲ್ಲಿ ವಾಕ್ ಶ್ರವಣದೋಷ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ 2024 ಇದನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಶಿಬಿರಗಳು ಗ್ರಾಮ ಹಂತದಲ್ಲಿ ನಡೆದಾಗ ಮೂಲೆ ಮೂಲೆಯ ವ್ಯಕ್ತಿಗಳಿಗೆ ತಮ್ಮ ಆರೋಗ್ಯ ಸಮಸ್ಯೆಯನ್ನು ತಕ್ಷಣದಲ್ಲಿ ಕಂಡುಹಿಡಿದು ಸುಧಾರಿಸಲು ನೆರವಾಗುತ್ತದೆ ಈ ರೀತಿಯಾಗಿ ಯನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಉತ್ತಮವಾದ ಕೆಲಸ ಕಾರ್ಯಗಳನ್ನು ಮಾಡುತ್ತಿವೆ ಇವರ ಆರೋಗ್ಯ ಕಾಳಜಿಯು ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಇವರು ಮಾತನಾಡಿದರು.

ಮಗುವಿನ ಚಟುವಟಿಕೆ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿಯೇ ಮಗುವಿನ ಬಗ್ಗೆ ತಿಳುವಳಿಕೆ ಪಡೆದುಕೊಂಡು ಅದರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿದಾಗ ವಿಶೇಷ ಅಗತ್ಯವುಳ್ಳ ಮಗುವಿನ ಬಗ್ಗೆ ಇರುವ ದೋಷವನ್ನು ನಿವಾರಿಸಲು ಸುಲಭವಾಗುತ್ತದೆ. ಪ್ರತಿಯೊಂದು ಮಗು ವಿಶೇಷವಾಗಿದೆ ಮಗುವಿನ ಬೆಳವಣಿಗೆಯು ಗಮನಾಹ೯ವಾದ ಬದಲಾವಣೆಯನ್ನು ತಕ್ಷಣ ಸ್ಪಂದನೆಗೆ ಒಳಪಡಿಸಿದಾಗ ಮಗು ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಮಗುವಿನ ಮಾನಸಿಕ ಬೌದ್ಧಿಕ ಹಾಗೂ ದೈಹಿಕ ಬದಲಾವಣೆ ಬಗ್ಗೆ ಪೋಷಕರು ಗಮನಹರಿಸಬೇಕು ಮತ್ತು ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನ ಪಡಬೇಕು ಎಂದು ದಕ್ಷಿಣ ಕನ್ನಡ ಕದಳಿ ಮಹಿಳಾ ವೇದಿಕೆ ಆದ್ಯೆಕ್ಷೆ ಬಂಟ್ವಾಳ ತಾಲೂಕು ವಿಶೇಷ ಸಂಪನ್ಮೂಲ ಅಧಿಕಾರಿ ಸುರೇಖಾ ಯಾಳವಾರ ಇವರು ತಮ್ಮ ಪ್ರಸ್ತಾವಿಕ ಮಾತಿನಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ 14 ರಿಂದ 17 ರ ವಯೋಮಿತಿ ಒಳಗಿನ ವಿಶೇಷ ಚೇತನ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದ ಜಾವಲಿನ್ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ಸುಜೀರ್ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ಮಾ| ಭವಿಷ್ ಇವರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ನಾರುಕೋಡಿ , ವಾಕ್ ಮತ್ತು ಶ್ರವಣ ವಿಭಾಗ ಯನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇದರ ಎಚ್ ಒ ಡಿ ಶ್ವೇತಾ ಪ್ರಭು, ಮೆಡಿಕಲ್ ಕಾಲೇಜಿನ ನಿಮಲ್ಕಾ, ಮೇಲ್ಕಾರಿನ ಚಂದ್ರಿಕಾ ವೆಜಿಟೇಬಲ್ಸ್ ಇದರ ಮಾಲಕರಾದ ಮಹಮ್ಮದ್ ಶರೀಫ್, ಲಯನ್ಸ್ ಕ್ಲಬ್ ವಿಟ್ಲ ಇಲ್ಲಿನ ನಿಕಟಪೂರ್ವ ಅಧ್ಯಕ್ಷರಾದ ಸುದೇಶ್ ಭಂಡಾರಿ, ವೀರಕಂಬ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಮೈರ , ಬಂಡವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಗೌರವ ಅಧ್ಯಕ್ಷರಾದ ರತ್ನಾವತಿ, ಸಂಪನ್ಮೂಲ ವ್ಯಕ್ತಿಗಳಾದ ಕಿರಣಕುಮಾರಿ, ಪ್ರಶಾಂತ್, ರವೀಂದ್ರ ರವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಬೆನಡಿಕ್ಟ ಸ್ವಾಗತಿಸಿ ಸಹ ಶಿಕ್ಷಕಿ ಅನುಷಾ ವಂದಿಸಿ , ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.

More from the blog

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...