Wednesday, February 12, 2025

ಬೇಸಿಗೆ ಶಿಬಿರ: ವಿದ್ಯಾರ್ಥಿಗಳ ಕೌಶಲಾಭಿವೃದ್ಧಿ

ಉಜಿರೆ: ಶುಚಿ-ರುಚಿಯಾದ ಪಾಯಸ, ಹಲಸಿನ ಹಣ್ಣಿನ ಮಂಚೂರಿ, ಬಟಾಟೆಚಿಪ್ಸ್, ರಾಗಿ ಮುದ್ದೆ, ಗೋಧಿ ಹಿಟ್ಟಿನ ಲಾಡು- ಇದುಯಾವುದೇ ಪಂಚತಾರಾ ಹೋಟೆಲಿನ ಮೆನು ಅಲ್ಲ!
ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ.ಆಂಗ್ಲಮಾಧ್ಯಮ ಶಾಲೆಯಲ್ಲಿ ಏಪ್ರಿಲ್‌ ಒಂದರಿಂದ ಮೂರನೆ ತಾರೀಕಿನ ವರೆಗೆ ಮೂರು ದಿನಗಳಲ್ಲಿ ಎಂಟು ಮತ್ತುಒಂಬತ್ತನೆತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳು ತಯಾರಿಸಿದ ಐಟಂಗಳು.


ತೆಂಗಿನಗರಿ (ತುಳು: ಮಡಲು) ಹೆಣೆಯುವುದು, ಹಳೆಜೀನ್ಸ್ ಬಳಸಿ ಆಕರ್ಷಕ ಕೈ ಚೀಲ ತಯಾರಿ, ಬಟ್ಟೆಯನ್ನು ಬಳಸಿ ಅಲಂಕಾರಿಕ ಹೂಗಳ ತಯಾರಿ, ತೆಂಗಿನಗೆರಟೆ ಬಳಸಿ ಕಲಾತ್ಮಕ ವಸ್ತುಗಳ ತಯಾರಿ, ಬಣ್ಣದ ಮರಗಳನ್ನು ರೂಪಿಸುವುದು, ಬಳಸಿದ ಹಳೆ ತಂತಿಗಳನ್ನು ಬಳಸಿ ಚೀಲ ತಯಾರಿ-ಇತ್ಯಾದಿ ಕಲೆಯನ್ನು ವಿದ್ಯಾರ್ಥಿಗಳು ಮೂರು ದಿನಗಳ ಶಿಬಿರದಲ್ಲಿ ಕರಗತ ಮಾಡಿಕೊಂಡರು. ನೋಡಿ ತಿಳಿದರು, ಮಾಡಿಕಲಿತರು!
ಶಾಲಾ ಮುಖ್ಯ ಶಿಕ್ಷಕಿ ಪರಿಮಳ, ಎಂ. ವಿ. ಹಾಗೂ ಇತರ ಶಿಕ್ಷಕರು, ಶಿಕ್ಷಕಿಯರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು.
ಅಯ್ಯಯ್ಯ ಎಂಚ ಪೊರ್ಲಾಂಡ್ ಎಂದು ಪ್ರೇಕ್ಷಕರೆಲ್ಲ ಅಚ್ಚರಿಪಟ್ಟರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...