Monday, January 26, 2026

“ಉಚಿತ ಬ್ರಹತ್ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ” ಶಿಬಿರ

ಬಂಟ್ವಾಳ: ಕಥೊಲಿಕ್ ಸಭಾ(ರಿ) ಲೋರೆಟ್ಟೊ ಘಟಕ ಹಾಗೂ ಲೋರೆಟ್ಟೊ ಫ್ರೆಂಡ್ಸ್ ಕ್ಲಬ್(ರಿ)  ಲೋರೆಟ್ಟೊ ಇವರ ಜಂಟಿ ಆಶ್ರಯದಲ್ಲಿ  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಂಕನಾಡಿ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ ,ತುಂಬೆ ಇವರ ಸಹಯೋಗದಲ್ಲಿ “ಉಚಿತ ಬ್ರಹತ್ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ” ಶಿಬಿರವನ್ನು ಲೋರೆಟ್ಟೋ ಚರ್ಚ್ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಶಿಬಿರ ವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೋರೆಟ್ಟೋ ಚರ್ಚ್ ಧರ್ಮಗುರುಗಳಾದ ವಂ.ಎಲಿಯಸ್ ಡಿಸೋಜಾ ರವರು  ಆರೋಗ್ಯವನ್ನು  ಕಾಪಾಡುವುದು  ನಮ್ಮ ಕೈಯಲ್ಲಿ ಇದೆ, ಆರೋಗ್ಯವಂತ ವ್ಯಕ್ತಿ ಏನು ಬೇಕಾದರೂ ಸದಿಸಬಲ್ಲರು, ಆರೋಗ್ಯ  ಸ್ತತಃ ಸೊತ್ತು ಅದು ಬೇರೆಯವರ ಸೊತ್ತಲ್ಲ. ಇದೊಂದು ಉತ್ತಮ ಕಾರ್ಯಕ್ರಮ , ನಮ್ಮ ಪರಿಸರದ ನಾಗರಿಕರು ಉತ್ತಮ ಆರೋಗ್ಯ ಕಾಪಾಡುವ ಹಿತದ್ರಷ್ಟಿಯಿಂದ ಅಯೋಜಕರಿಗೆ ಕೃತಜ್ಞತೆ ಅರ್ಪಿಸಿದರು.
 ಮುಖ್ಯ ಅತಿಥಿಗಳಾಗಿ ಆಗಮಿಸಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಫಾದರ್ ಮುಲ್ಲರ್ ಆಸ್ಪತ್ರೆಯ ಅಡಳಿತಾಧಿಕಾರಿಯಾದ ವಂ.ವಿನ್ಸೆಂಟ್ ಸಿಲ್ವೇಸ್ಟರ್ ಲೋಬೊ ಮಾತನಾಡಿ ಶಿಬಿರದ ಮಹತ್ವದ ಬಗ್ಗೆ ವಿವರಣೆ ನೀಡಿದರು. ಲೋರೆಟ್ಟೊ ಪರಿಸರದಲ್ಲಿ ಆರೋಗ್ಯ ಶಿಬಿರಕ್ಕೆ  ಉತ್ತಮ ಪ್ರತಿಕ್ರಿಯೆ ಲಭಿಸಿದೆ.ವೇದಿಕೆಯಲ್ಲಿ ಕಥೊಲಿಕ್ ಸಭಾ ಬಂಟ್ವಾಳ ವಲಯದ ನಿಕಟಪೂರ್ವ ಅಧ್ಯಕ್ಷ ರಾದ ಸ್ಟಾನಿ ಲೋಬೊ,ಲೋರೆಟ್ಟೋ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ರಿಚರ್ಡ್ ಮಿನೇಜಸ್,ಪಾಲನಾ ಮಂಡಳಿಯ ಕಾರ್ಯದರ್ಶಿ ಸಿಪ್ರಿಯನ್ ಡಿಸೋಜಾ, ಕಥೊಲಿಕ್ ಸಭಾ ಲೋರೆಟ್ಟೊ ಘಟಕದ ಅಧ್ಯಕ್ಷರಾದ ಮಾರ್ಕ್ ಲೋಬೊ,ಲೋರೆಟ್ಟೊ ಫ್ರೆಂಡ್ಸ್ ಕ್ಲಬ್  ಅಧ್ಯಕ್ಷರಾದ ಪ್ರವೀಣ್ ಪಿಂಟೊ ಉಪಸ್ಥಿತರಿದ್ದರು. ಸುಮಾರು 300ಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದರು, ಸಿಪ್ರಿಯನ್ ಡಿಸೋಜಾ ಸ್ವಾಗತಿಸಿದರು, ಪ್ರವೀಣ್ ಪಿಂಟೊ ವಂದಿಸಿದರು. ಅಲ್ವಿನ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...