Tuesday, February 11, 2025

ವಿಟ್ಲ: ಕಾನೂನು ಮಾಹಿತಿ ಶಿಬಿರ

ವಿಟ್ಲ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಮಾಣಿ ಗ್ರಾ.ಪಂ. ನಲ್ಲಿ ನಡೆದ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರವನ್ನು ಸಹಾಯಕ ಸರಕಾರಿ ಅಭಿಯೋಜಕ ಹಾಗೂ ತಾ.ಕಾ.ಸೇ.ಸಮಿತಿಯ ಕಾರ್‍ಯನಿರ್ವಾಹಕ ಕಾರ್‍ಯದರ್ಶಿ ಎಂ.ಎಸ್.ಆಲಿ ಉದ್ಘಾಟಿಸಿದರು.
ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ದೀಪಕ್ ಪೆರಾಜೆ ಮೋಟಾರು ವಾಹನ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ವಕೀಲರು ಗಳಾದ ಜನಾರ್ಧನ್ ಶೆಟ್ಟಿ, ಶೈಲಜಾ ರಾಜೇಶ್, ಗಣೇಶ್ ಪೈ, ಶ್ರೀಧರ ಪೈ, ಪ್ರಶಾಂತ್, ಸತೀಶ್ ಬಿ., ಪಂ.ಸದಸ್ಯ ಇಬ್ರಾಹಿಂ ಕೆ. ಮತ್ತಿತರರು ಉಪಸ್ಥಿತರಿದ್ದರು.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...