Tuesday, January 27, 2026

ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.

10 ಲಕ್ಷ ರೂ ಅನುದಾನದ ರಾಮರೆಪಾಲು ಹೊಸಹೊಕ್ಲು ರಸ್ತೆ ಉದ್ಘಾಟನೆ, 30 ಲಕ್ಷ ಅನುದಾನದ ನಡುರ್ದಿಲ ತಡೆಗೋಡೆ, 2 ನೇ ವಾರ್ಡಿನ ಜನತಾ ಕಾಲನಿರಸ್ತೆ ಉದ್ಘಾಟನೆ, ಉರ್ದಿಲ ಕ್ರೀಡಾಂಗಣದ ಹೈ ಮಾಸ್ಕ್ ದೀಪ ಉದ್ಘಾಟನೆ, 13 ಲಕ್ಷ ವೆಚ್ಚದ ಕರಿಂಕ ಅಂಗನವಾಡಿ ಕೇಂದ್ರ ಉದ್ಘಾಟನೆ, 15 ಲಕ್ಷ ವೆಚ್ಚದ ಪಂತಡ್ಕ ಗುಂಡ್ಯ ಎಲ್ಕಾಜೆ ಪರಿಶಿಷ್ಠ ಪಂಗಡ ಕಾಲನಿ ರಸ್ತೆ ಕಾಂಕ್ರೀಟಿಕರಣ,10 ಲಕ್ಷ ಮಾದೇಲು ಮೀನಾವು ರಸ್ತೆಗೆ ಶಿಲಾನ್ಯಾಸ, 10ಲಕ್ಷ ಅನುದಾನದಲ್ಲಿ ಮೈಕೆ ಯಿಂದ ಏಮಾಜೆ ರಸ್ತೆ ಉದ್ಘಾಟನೆ, 50 ಲಕ್ಷ ವೆಚ್ಚದ ಏಮಾಜೆ ರಸ್ತೆಗೆ ಶಿಲಾನ್ಯಾಸ ,14ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರಿಂಕ ಹೊಸ ಹೊಕ್ಲು ಕಾಲುಸಂಕ ಉದ್ಘಾಟನೆ, 10 ಲಕ್ಷದ ದಲ್ಲಿ ಕಾಂಕ್ರಿಟೀಕರಣಗೊಂಡ ನೇರಳಕಟ್ಟೆ ಕರ್ಲೆತ್ತಿಮಾರ್ ರಸ್ತೆಯನ್ನು ಹಾಗೂ ನೆಟ್ಲಮುಡ್ನೂರು ಗ್ರಾ.ಪಂ.ಕಚೇರಿ ಬಳಿ ನಿರ್ಮಾಣಗೊಂಡ ಜಲಜೀವನ್ ಮಿಷನ್ ಯೋಜನೆಯ ಮೇಲ್ ಸ್ತರದ ನೀರಿನ‌ಟ್ಯಾಂಕ್ ಅನ್ನು ಶಾಸಕರು‌ ಉದ್ಘಾಟಿಸಿದರು.

ನೆಟ್ಲ‌ಮುಡ್ನೂರು‌ ಗ್ರಾ.ಪಂ.ಅಧ್ಯಕ್ಷ ಸಚ್ಚಿದಾನಂದ, ಉಪಾಧ್ಯಕ್ಷೆ ಶಕೀಲಾ, ಅನಂತಾಡಿ ಗ್ರಾ.ಪಂ.ಸದಸ್ಯರಾದ ಸುಜಾತ, ಧನಂಜಯ, ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ವಿಟ್ಲ ಪಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ಕುಮಾರ್ ರೈ, ತನಿಯಪ್ಪ ಗೌಡ, ರವೀಂದ್ರ ರೈ, ಧನಲಕ್ಷ್ಮಿ ಪೂಜಾರಿ, ಪಿಡಿಓ ಅನುಷಾ, ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ, ಮೇಲ್ವಿಚಾರಕಿ ಸೋಮಕ್ಕ, ಅಂ.ಕಾರ್ಯಕರ್ತೆ ಯೋಗಿನಿ ಮೊದಲಾದವರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...