Thursday, February 13, 2025

ಗೋಪುರ ನಿರ್ಮಾಣದ ಶಿಲಾನ್ಯಾಸ

ಬಂಟ್ವಾಳ: ಊರ ಪರ ಊರ ದಾನಿಗಳ ಸಹಕಾರದಿಂದ ಸುಮಾರು 1 ಕೋಟಿ ವೆಚ್ಚದಲ್ಲಿ ಸಜೀಪ ಮಾಗಣೆಗೆ ಸಂಬಂಧಿಸಿದ ಸಜೀಪ ಮೂಡ ಗ್ರಾಮದ ಸಂಕೇಶ ಎಂಬಲ್ಲಿರುವ ನಡಿಯೇಲು ದೈಯಂಗಳು ಉಳ್ಳಾಲ್ತಿ ಅಮ್ಮ ಮತ್ತು ನಾಲ್ಕೈತ್ತಾಯ ದೈವಗಳ ಭಂಡಾರದ ಮನೆಯ ನೂತನ ಗೋಪುರ ನಿರ್ಮಾಣ ಕ್ಕೆ ಇಂದು  ಬೆಳಿಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೇರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನು ಮಾಜಿ.ಜಿ.ಪಂ.ಆದ್ಯಕ್ಷ ಸಜೀಪ ಮಾಗಣೆಯ ಮುಖ್ಯಸ್ಥ ಸದಾನಂದ ಪೂಂಜಾ , ಗಡಿ ಪ್ರಧಾನರಾದ ಕಾಂತಾಡಿಗುತ್ತು ಬರಂಗರೆ ಗಣೇಶ ನಾಯ್ಕ್ ಯಾನೆ ಉಗ್ಗಶೆಟ್ಟಿ, ಸಜೀಪ ಗುತ್ತು ಗಡಿ ಪ್ರಧಾನ ರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದ ರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸದಾನಂದ ಪೂಂಜಾ ಅವರು ದ.ಕ.ಜಿಲ್ಲೆಯ ಲ್ಲಿ ಆರಾಧಿಸಲ್ಪಡುವ ಅನೇಕ  ಕ್ಷೇತ್ರಗಳಿವೆ. ಆದರೆ
ಸಜೀಪ ಮೂಡದ ಸಂಕೇಶ ಭಂಡಾರದ ಮನೆಯಲ್ಲಿ ಅರಾಧಿಸುವ ಉಳ್ಳಾಲ್ತಿ ಕ್ಷೇತ್ರ ವೈಶಿಷ್ಟ್ಯ ತೆಯನ್ನು ಹೊಂದಿದೆ ಎಂದು ಅವರು ಹೇಳಿದರು.
ಈ ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರ ಸಹಕಾರ ಬೇಕು ಎಂದು ಅವರು ಹೇಳಿದರು. ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಧ್ಯಕ್ಷ ಶ್ರೀ ಕಾಂತ ಶೆಟ್ಟಿ, ಸಂಕೇಶ , ಪ್ರಮುಖರಾದ ಸುಬ್ರಹ್ಮಣ್ಯ ಭಟ್, ವೆಂಕಟೇಶ್ ಬಟ್, ಜಯಶಂಕರ ಬಾಸ್ರಿತ್ತಾಯ, ನಗ್ರಿಗುತ್ತು ಜಯರಾಮ ಶೆಟ್ಟಿ, ಸಂಕಪ್ಪ ಶೆಟ್ಟಿ ಪಾಲಮಂಟಪ ಮನೆ, ಬಿಜಾಂದರ್ ಗುತ್ತು ಶಿವರಾಮ ಭಂಡಾರಿ, ಯಶವಂತ ದೇರಾಜೆ, ದೇವಿಪ್ರಸಾದ ಪೂಂಜಾ ಉಪಸ್ಥಿತರಿದ್ದರು.
ಮಾಜಿ ಜಿ.ಪಂ.ಅದ್ಯಕ್ಷ ಸದಾನಂದ ಪೂಂಜಾ ಸ್ವಾಗತಿಸಿ, ಶಿವಪ್ರಸಾದ್ ಮಾಸ್ಟರ್ ವಂದಿಸಿದರು.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...