ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ನಡೆದಿದೆ.


ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ.
ರಾಜೇಶ್ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ತಂಗಿ ಮನೆಯಲ್ಲಿ ಪ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ. ಈತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಸಂಬಂಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.