Wednesday, February 12, 2025

ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಪೊಲೀಸ್ ಲೈನ್ ಬಿಸಿರೋಡು ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವದ ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆ

ಬಂಟ್ವಾಳ: ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಪೋಲೀಸ್ ಲೈನ್ ಬಿಸಿರೋಡು ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಮಹೋತ್ಸವ ಕಾರ್ಯಕ್ರಮ ಫೆ. 16 ರಿಂದ 23 ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಇಂದು ಹಸಿರು ಹೊರೆ ಕಾಣಿಕೆ ನಡೆಯಿತು.

ಬ್ರಹ್ಮಕಲಶೋತ್ಸವ ಅಂಗವಾಗಿ ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದಿಂದ ಕ್ಷೇತ್ರದ ವರೆಗೆ ಹಸಿರುವಾಣಿ ಹೊರೆ ಕಾಣಕೆ ಮೆರವಣಿಗೆ ವಿಜ್ರಂಭಣೆಯಿಂದ ನಡೆಯಿತು.

ಹಸಿರುಹೊರೆಕಾಣಿಕೆ ಮೆರವಣಿಗೆಯನ್ನು ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇಲ್ಲಿಯ ಶ್ರೀ ಶ್ರೀ ವಿವೇಜ ಚೈತನ್ಯಾಂದ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕುರಿಯಾಳ ರಘನಾಥ ಪಯ್ಯಡೆ ಹಾಗೂ ಉದ್ಯಮಿ ರಘ ಸಪಲ್ಯ ಅವರು ಉದ್ಘಾಟಲಿಸಿದರು.

ವಾಹನಗಳು ಹಸಿರು ಹೊರೆಕಾಣಿಕೆಯಲ್ಲಿ ಕುಣಿತ ಭಜನೆ,ಚೆಂಡೆ, ಬ್ಯಾಂಡ್ ವಾದ್ಯ, ಗೊಂಬೆ ಕುಣಿತ ವಿಶೇಷ ಆಕರ್ಷಣೆಯಾಗಿತ್ತು

ಫೆ. 16 ರಿಂದಫೆ.23 ರವರೆಗೆ ನಿತ್ಯ ವೈಧಿಕ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ ನಡೆಯಲಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಜೀರ್ಣೊಧ್ದಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಸಹಿತ ವಿವಿಧ ಸಮಿತಿಯ ಪ್ರಮುಖರು, ಊರಿನ ಗಣ್ಯರು ಹಾಗೂ ವಿವಿಧ ಸಂಘಸಂಸ್ಥೆಗಳು ಭಾಗವಹಿಸಿದವು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...