Wednesday, January 28, 2026

ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಬೇಡಿ: ನಗರ ಠಾಣಾ ಎಸ್. ಐ.ಅವಿನಾಶ್ ಪತ್ರ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಬೀದಿ ಬೀದಿಯಲ್ಲಿ ವ್ಯಾಪಾರ ಮಾಡಲು ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಪುರಸಭಾ ಅಧಿಕಾರಿಗಳಿಗೆ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಅವರು ಪತ್ರ ಬರೆದಿದ್ದಾರೆ.
ಕೊರಾನೊ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಸಂತೆ ಅಥವಾ ಬೀದಿಯಲ್ಲಿ ವ್ಯಾಪಾರ ಮಾಡಲು ಸರಕಾರ ನಿಷೇಧಿಸಲಾಗಿದೆ.
ಆದರೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕೆಲವು ಕಡೆಗಳಲ್ಲಿ ಬೀದಿಯಲ್ಲಿ ವ್ಯಾಪಾರಗಳು ಭರದಿಂದ ನಡೆಯುತ್ತಿದೆ.

ಅಜಾಗರೂಕತೆಯಿಂದ ಜನರು ಗುಂಪು ಸೇರಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೀದಿ ಬದಿಯಲ್ಲಿ ವ್ಯಾಪಾರ ನಡೆಯುತ್ತಿರುವುದರಿಂದ ಕೊರೊನಾ ಹರಡುವುದಕ್ಕೆ ಕಾರಣವಾಗಬಹುದು .ಹಾಗಾಗಿ ಪುರಸಭೆ ಅವಕಾಶ ನೀಡಬಾರದು ಎಂದು ಅವರು ಪತ್ರ ಮುಖೇನ ತಿಳಿಸಿದ್ದಾರೆ.

ನಾಳೆಯಿಂದ ಬಿಗಿ
ಸರಕಾರದ ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಹೆಚ್ಚು ಬಿಗಿಗೊಳಿಸುವ ಬಗ್ಗೆಯೂ ಅವರು ತಿಳಿಸಿದ್ದಾರೆ.
ಅಂಗಡಿಗಳಲ್ಲಿ ಅಥವಾ ಬ್ಯಾಂಕ್ ಗಳಲ್ಲಿ ಒಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವ್ಯವಹಾರ ನಡೆಸುವ ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲಿದ್ದೇವೆ. ಅನಾವಶ್ಯಕವಾಗಿ ತಿರುಗಾಟ ನಡೆಸುವ ವಾಹನ ಸವಾರರಿಗೂ ಈ ಹಿಂದಿಗಿಂತ ಹೆಚ್ಚು ಬಿಗಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ಬೀದಿಯಲ್ಲಿ ವ್ಯಾಪಾರ ಮಾಡುವರಿಗೂ ಹೆಚ್ಚಿನ ಬಿಗಿ ಮಾಡಲಾಗುತ್ತದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...