Monday, January 26, 2026

52 ಹರೆಯದ ಒಬ್ಬಂಟಿ ಮಹಿಳೆಗೆ ಹಲ್ಲೆ ನಡೆಸಿ ಮನೆಯೊಳಗೆ ಕೂಡಿ ಹಾಕಿ ಅತ್ಯಾಚಾರ!

ಬಂಟ್ವಾಳ: ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52 ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ನಡೆದಿದ್ದು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ.
ಸಿದ್ದಕಟ್ಟೆ ಅನಿಲ್ ಎಂಬಾತ ಅತ್ಯಾಚಾರ ಆರೋಪಿಯಾಗಿದ್ದು , ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ.
ಅಗಸ್ಟ್ 11 ರಂದು ಘಟನೆ ನಡೆದಿದ್ದು ತಡವಾಗಿ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿಯಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡಪಾಯಿ ಮಹಿಳೆ.
ಇವರು ಗಂಡನನ್ನು ಕಳೆದುಕೊಂಡು ಬಳಿಕ ಮಗಳೊಂದಿಗೆ ವಾಸವಾಗಿದ್ದರು ಆದರೆ ಕೆಲ ವರ್ಷಗಳ ಹಿಂದೆ ಮಗಳಿಗೆ ಮದುವೆಯಾಗಿದ್ದು ಒಬ್ಬಂಟಿಯಾಗಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.
ಅಂತಹ ಬಡಪಾಯಿ ಮಹಿಳೆಗೆ ಹಲ್ಲೆ ನಡೆಸಿ ,ಅತ್ಯಾಚಾರ ಮಾಡಿ ಬಳಿಕ ಯಾರ ಬಳಿಯಲ್ಲಿ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಅತ್ಯಾಚಾರ ಕ್ಕೊಳಗಾದ 52 ಹರೆಯದ ಮಹಿಳೆ ಕೂಲಿ ಕೆಲಸ ಮಾಡಿ ಮನೆಗೆ ಬಂದು ಬಚ್ಚಲಿನಲ್ಲಿ ಬಿಸಿ ನೀರು ಕಾಯಿಸಲು ಎಂದು ಹೋದಾಗ ಆರೋಪಿ ಅನಿಲ್ ಬಂದು ಮಹಿಳೆಯನ್ನು ಬಲಾತ್ಕಾರವಾಗಿ ಮನೆಯೊಳಗೆ ಎಳೆದುಕೊಂಡು ಹೋಗಿ ಮನೆಯೊಳಗೆ ಕೂಡಿ ಹಾಕಿ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ಹಲ್ಲೆ ನಡೆಸಿ ಬಳಿಕ ಅತ್ಯಾಚಾರ ಮಾಡಿದ್ದಾನೆ.
ಅತ್ಯಾಚಾರ ಮಾಡಿದ ಬಳಿಕ ಯಾರಿಗೂ ತಿಳಿಸಿದರೆ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ.
ಆ ಬಳಿಕ ಅತ್ಯಾಚಾರ ಕ್ಕೊಳಗಾದ ಮಹಿಳೆ ಮಗಳಿಗೆ ಹಾಗೂ ಅಳಿಯನಿಗೆ ಪೋನ್ ಕರೆ ಮಾಡಿ ತಿಳಿಸಲಾಗಿ ಅವರ ಜೊತೆ ಗ್ರಾಮಾಂತರ ಪೋಲೀಸ್ ಸ್ಟೇಷನ್ ಆಗಮಿಸಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪೋಲೀಸರು ಅತ್ಯಾಚಾರ ಎಸಗಿ ಪರಾರಿಯಾಗಿರುವ ಆರೋಪಿಗೆ ಬಲೆ ಬೀಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...