Monday, January 26, 2026

ಸಿದ್ಧಕಟ್ಟೆ: ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಮಾತೆಯರ ಸಭಾ ಕಾರ್ಯಕ್ರಮ

ಸಿದ್ಧಕಟ್ಟೆ :  ದೇಶದ ನಾನಾ ಭಾಗದಲ್ಲಿ  ನವರಾತ್ರಿ ಸಂದರ್ಭ ವಿಶೇಷವಾಗಿ ಆಚರಣೆಗಳಿವೆ. ಧಾರ್ಮಿಕ ಆಚರಣೆಗಳು ಎಲ್ಲರನ್ನೂ ಒಗ್ಗೂಡಿಸುತ್ತದೆ ಎಂದು ಸಾಮಾಜಿಕ ಚಿಂತಕಿ ಸವಿತಾ ರಮೇಶ್ ಹೇಳಿದರು.
 ಬಂಟ್ವಾಳ ತಾಲೂಕಿನ  ಸಿದ್ಧಕಟ್ಟೆ ಯ ಕೇಂದ್ರ ಮೈದಾನದಲ್ಲಿ  ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಇದರ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಮಾತೆಯರ ಸಭಾ ಕಾರ್ಯಕ್ರಮದಲ್ಲಿ  ಅವರು ಶನಿವಾರ ದಿಕ್ಸೂಚಿ ಭಾಷಣ ಮಾಡಿದರು.
ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ  ಪುಂಜಾಲಕಟ್ಟೆ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಸೌಮ್ಯ ಜೆ., ನಿವೃತ್ತ ಶಿಕ್ಷಕಿ ರತ್ನಾವತಿ ಜೆ. ಬೈಕಾಡಿ, ಶ್ರೀ. ಧ.ಗ್ರಾ. ಯೋಜನೆ ಸಿದ್ಧಕಟ್ಟೆ ವಲಯ ಮೇಲ್ವಿಚಾರಕರಾದ ಹರಿಣಾಕ್ಷಿ ರೈ, ಸಿದ್ಧಕಟ್ಟೆ ಅನಂತಪದ್ಮಾ ಹೆಲ್ತ್ ಸೆಂಟರ್ ವೈದ್ಯೆ ಡಾ. ಸೀಮಾ ಸುದೀಪ್, ನ್ಯಾಯವಾದಿ ಶೈಲಜಾ ರಾಜೇಶ್, ಕೊಯಿಲ ಸಿದ್ದಿಶ್ರೀ ಭಜನಾ ಮಂಡಳಿ ಅಧ್ಯಕ್ಷೆ ಸುಮಿತ್ರಾ ಆರ್. ಶೆಟ್ಟಿಗಾರ್ ಅಣ್ಣಳಿಕೆ ವೇದಿಕೆಯಲ್ಲಿದ್ದರು.
ಸಮಿತಿ ಗೌರವಾಧ್ಯಕ್ಷ ಬಿ. ರಮಾನಾಥ ರೈ, ಅಧ್ಯಕ್ಷ  ಲೋಕೇಶ ಶೆಟ್ಟಿ ಮೊಯಿಲೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ಮಂಜಿಲ, ಕೋಶಾಧಿಕಾರಿ ಉಮೇಶ ಹಿಂಗಾಣಿ,  ಸಂಘಟನಾ ಕಾರ್ಯದರ್ಶಿ ದಿನೇಶ ಸುಂದರ ಶಾಂತಿ, ಪ್ರಧಾನ ಸಂಚಾಲಕ  ಜಗದೀಶ ಕೊಯಿಲ ಹಾಗೂ ನಾನಾ ಸಮಿತಿ ಸದಸ್ಯರು ಇದ್ದರು. ಸ್ವಾಗತ ಸಮಿತಿಯ ಸಹ ಸಂಚಾಲಕಿ ಅರುಣಾ ವಿಶ್ವನಾಥ ಪೂಜಾರಿ ದೋಟ ಸ್ವಾಗತಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...