ಬಂಟ್ವಾಳ: ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 10 ಸ್ಥಾನವನ್ನು ಗಳಿಸಿದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನವನ್ನು ಪಡೆದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಭಾಕರ ಪ್ರಭು ಕರ್ಪೆ, ಸಂದೇಶ್ ಶೆಟ್ಟಿ ಸಂಗಬೆಟ್ಟು, ರಾಜೇಶ್ ಶೆಟ್ಟಿ ಎಳಿಯನಡುಗೋಡು, ದಿನೇಶ್ ಪೂಜಾರಿ ಆರಂಬೋಡಿ, ಮಂದಾರತಿ ಶೆಟ್ಟಿ ಸಂಗಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ ಸಂಗಬೆಟ್ಟು, ಸತೀಶ್ ಪೂಜಾರಿ ಸಂಗಬೆಟ್ಟು, ಜಾರಪ್ಪ ನಾಯ್ಕ ಕರ್ಪೆ, ವೀರಪ್ಪ ಪರವ ಆರಂಬೋಡಿ ವಿಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪದ್ಮರಾಜ್ ಬಲ್ಲಾಳ್, ಅರುಣಾ ಸುರೇಶ್ ಶೆಟ್ಟಿ, ದೇವರಾಜ್ ಸಾಲಿಯಾನ್ ಅವರು ವಿಜಯ ಸಾಧಿಸಿದ್ದಾರೆ.