Tuesday, February 11, 2025

ರಾಷ್ಟ್ರೀಯ ಮತದಾನ ದಿನಾಚರಣೆ

ಬಂಟ್ವಾಳ :ದಿನಾಂಕ 25/01/2019 ರ ಪೂರ್ವಾಹ್ನ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ ಇದರ ಸಹಯೋಗದೊಂದಿಗೆ ಮತದಾರರ ದಿನವನ್ನು ಆಚರಿಸಲಾಯಿತು.
ಪೂರ್ವಾಹ್ನ 9.00 ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇದರ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕ ವೃಂದ ಜೊತೆಯಾಗಿ ಪ್ರಥಮ ದರ್ಜೆ ಕಾಲೇಜಿನ ಆವರಣದಿಂದ ಮತದಾರರ ಜಾಗೃತಿ ಮೂಡಿಸುವ ಘೋಷಣೆಗಳೊಂದಿಗೆ ಜಾಥಾ ಹೊರಟು ಸಿದ್ಧಕಟ್ಟೆ ಚರ್ಚ್, ಮಾರುಕಟ್ಟೆ, ಪೇಟೆಯ ಪರಿಸರದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮರಳಿ ಕಾಲೇಜಿನ ಆವರಣವನ್ನು ತಲುಪಿರುತ್ತಾರೆ. ಸ್ಥಳೀಯ ಜನಪ್ರಿಯ ವೈದ್ಯರಾದ ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆಇವರು ಜಾಥಾಗೆ ಚಾಲನೆ ನೀಡಿರುತ್ತಾರೆ.


ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್‌ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಮತದಾರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು. ಪ್ರತಿಯೊಂದನ್ನು ಅರ್ಥೈಸಿಕೊಂಡು ಹೆಜ್ಜೆ ಇಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮತದಾನದ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಮತದ ಮೌಲ್ಯವನ್ನು ಅರ್ಥೈಸಿಕೊಂಡು ಮತದಾನದಲ್ಲಿ ಭಾಗವಹಿಸಬೇಕು. ಗ್ರಾಮೀಣ ಪ್ರದೇಶದ ಮತದಾರರನ್ನು ಜಾಗೃತಿಗೊಳಿಸುವ ಮೂಲಕ ಶೇಕಡಾವಾರು ಮತದಾನವನ್ನು ಹೆಚ್ಚಿಸುವ ಕೆಲಸದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮನೀಶ್ ಪ್ರಥಮ ಬಿಎ ಪ್ರಾರ್ಥಿಸಿದರು. ಇಲೆಕ್ಟೋರಲ್ ಕ್ಲಬ್‌ನ ಸಹ ಸಂಚಾಲಕರಾದ ಶ್ರೀನಿವಾಸ ಗ್ರಂಥಪಾಲಕರು ಸ್ವಾಗತಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹನುಮಂತಯ್ಯ ಜಿ.ಹೆಚ್ ರವರು ವಂದಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪಾವನಿ ಪಿ ಕಾರ್ಯಕ್ರಮ ನಿರೂಪಿಸಿದರು.

ಪ್ರೊ. ಸತ್ಯನಾರಾಯಣ ಭಟ್ ಪ್ರಾಂಶುಪಾಲರು
ಮೊಬೈಲ್ :9449521720

ಕಛೇರಿ : 08255 269789

 

 

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...