ಬಂಟ್ವಾಳ :ದಿನಾಂಕ 25/01/2019 ರ ಪೂರ್ವಾಹ್ನ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ ಇದರ ಸಹಯೋಗದೊಂದಿಗೆ ಮತದಾರರ ದಿನವನ್ನು ಆಚರಿಸಲಾಯಿತು.
ಪೂರ್ವಾಹ್ನ 9.00 ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇದರ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕ ವೃಂದ ಜೊತೆಯಾಗಿ ಪ್ರಥಮ ದರ್ಜೆ ಕಾಲೇಜಿನ ಆವರಣದಿಂದ ಮತದಾರರ ಜಾಗೃತಿ ಮೂಡಿಸುವ ಘೋಷಣೆಗಳೊಂದಿಗೆ ಜಾಥಾ ಹೊರಟು ಸಿದ್ಧಕಟ್ಟೆ ಚರ್ಚ್, ಮಾರುಕಟ್ಟೆ, ಪೇಟೆಯ ಪರಿಸರದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮರಳಿ ಕಾಲೇಜಿನ ಆವರಣವನ್ನು ತಲುಪಿರುತ್ತಾರೆ. ಸ್ಥಳೀಯ ಜನಪ್ರಿಯ ವೈದ್ಯರಾದ ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆಇವರು ಜಾಥಾಗೆ ಚಾಲನೆ ನೀಡಿರುತ್ತಾರೆ.


ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಮತದಾರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು. ಪ್ರತಿಯೊಂದನ್ನು ಅರ್ಥೈಸಿಕೊಂಡು ಹೆಜ್ಜೆ ಇಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮತದಾನದ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಮತದ ಮೌಲ್ಯವನ್ನು ಅರ್ಥೈಸಿಕೊಂಡು ಮತದಾನದಲ್ಲಿ ಭಾಗವಹಿಸಬೇಕು. ಗ್ರಾಮೀಣ ಪ್ರದೇಶದ ಮತದಾರರನ್ನು ಜಾಗೃತಿಗೊಳಿಸುವ ಮೂಲಕ ಶೇಕಡಾವಾರು ಮತದಾನವನ್ನು ಹೆಚ್ಚಿಸುವ ಕೆಲಸದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮನೀಶ್ ಪ್ರಥಮ ಬಿಎ ಪ್ರಾರ್ಥಿಸಿದರು. ಇಲೆಕ್ಟೋರಲ್ ಕ್ಲಬ್ನ ಸಹ ಸಂಚಾಲಕರಾದ ಶ್ರೀನಿವಾಸ ಗ್ರಂಥಪಾಲಕರು ಸ್ವಾಗತಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹನುಮಂತಯ್ಯ ಜಿ.ಹೆಚ್ ರವರು ವಂದಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪಾವನಿ ಪಿ ಕಾರ್ಯಕ್ರಮ ನಿರೂಪಿಸಿದರು.
ಪ್ರೊ. ಸತ್ಯನಾರಾಯಣ ಭಟ್ ಪ್ರಾಂಶುಪಾಲರು
ಮೊಬೈಲ್ :9449521720
ಕಛೇರಿ : 08255 269789