ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಂದೇಶ್ ಶೆಟ್ಟಿ ಉಪಾಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ವಿದ್ಯಾರ್ಥಿಗಳಾದ ನೀವು ವಿದ್ಯಾರ್ಜನೆಯ ಸಂದರ್ಭದಲ್ಲಿ ತಮ್ಮೆಲ್ಲಾ ಪರಿಶ್ರಮವನ್ನು ಧಾರೆಯೆರೆದು ಯಶಸ್ಸನ್ನು ಗಳಿಸಿ ಹಾಗೂ ಅತ್ಯುತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಲಿಂಟನ್ ಲೋಬೊ Free Lance Trainer Mangalore ಇವರು ವಿದ್ಯಾರ್ಥಿಗಳಿಗೆ ಸ್ವ ಉದ್ಯೋಗ ಮತ್ತು ಅಂತರ್ಜಾಲದ ಬಳಕೆ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾದ ಆಂಡ್ರಿಯನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ತರಬೇತಿಯನ್ನು ನೀಡಿದರು. ಡಾ. ಪ್ರೀತಿ ಕೀರ್ತಿ ಡಿಸೋಜ, ವಾಣಿಜ್ಯ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಉನ್ನತ ಶಿಕ್ಷಣ ಹಾಗೂ ಉದ್ಯೋಗವಕಾಶಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆರಿಸಿಕೊಳ್ಳಬಹುದಾದ ವಿವಿಧ ವೃತ್ತಿಗಳು ಹಾಗೂ ಅವುಗಳಿಗೆ ಬೇಕಾದ ವಿದ್ಯಾರ್ಹತೆಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಭಾರತದಲ್ಲಿ ಪ್ರಮುಖ ಉದ್ಯೋಗದಾತರ ಕುರಿತು ವಿವರವಾದ ಪ್ರಾತ್ಯಕ್ಷಿಕೆಯನ್ನು ಒದಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಹೆಚ್.ಕೆ ಇವರು ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡುವಂತೆ ತಿಳಿಸಿದರು. ವೃತ್ತಿಯಲ್ಲಿ ಮೇಲು-ಕೀಳು ಎಂಬುದಿಲ್ಲ ಆಯ್ಕೆ ಮಾಡಿಕೊಂಡ ವೃತ್ತಿಯಲ್ಲಿ ಮನಪೂರ್ವಕವಾಗಿ ಹಾಗೂ ತ್ಯಾಗ ಮನೋಭಾವದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ವಿನಯ್ ಎಂ.ಎಸ್ ಸಹಾಯಕ ಪ್ರಾಧ್ಯಾಪಕರು ಆಂಗ್ಲ ಭಾಷಾ ವಿಭಾಗ ಇವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾರ್ಯಕ್ರಮದಲ್ಲಿ ಡಾ. ಶ್ರೀನಿವಾಸ ಗ್ರಂಥಪಾಲಕರು ವಂದಿಸಿದರು. ಮನೀಶ್ ತೃತೀಯ ಬಿಎ ಪ್ರಾರ್ಥಿಸಿ ಪ್ರಜ್ವಲ್ ತೃತೀಯ ಬಿಕಾಂ ನಿರೂಪಿಸಿದರು. ತರಬೇತಿಯು ದಿನಪೂರ್ತಿ ತೃತೀಯ ಪದವಿ ವಿದ್ಯಾರ್ಥಿಗಳಿಗೆ ನಡೆಯಿತು.
ಸೌಮ್ಯ ಹೆಚ್.ಕೆ
ಪ್ರಾಂಶುಪಾಲರು
ಮೊಬೈಲ್ : ೯೪೮೧೯೮೪೭೩೩
ಕಛೇರಿ : ೦೮೨೫೫ ೨೬೯೭೮೯
