Friday, June 27, 2025

ಸದೃಡ ಆರೋಗ್ಯವೇ ಜೀವನದ ಸಂಪತ್ತು: ಡಾ| ಪ್ರಭಾಚಂದ್ರ ಜೈನ್

ಬಂಟ್ವಾಳ : ಮನುಷ್ಯ ತನ್ನ ಜೀವನದಲ್ಲಿ ಎಷ್ಟು ಸಂಪತ್ತಭರಿತವಾಗಿ,ಪರಿಪೂರ್ಣತೆ ಹೊಂದಿದರೂ ಸಹ ಆರೋಗ್ಯದಲ್ಲಿ ಸಮತೋಲನ ಇಲ್ಲದಿದ್ದರೆ ಜೀವನ ಸಾರ್ಥಕವಾಗದು.ಈ ನಿಟ್ಟಿನಲ್ಲಿ ವ್ಯಕ್ತಿಯಲ್ಲಿನ ಸದೃಡ ಆರೋಗ್ಯವೇ ಜೀವನದ ಸಂಪತ್ತು ಎಂದೂ ಸಿದ್ದಕಟ್ಟೆ ಪದ್ಮ ಕ್ಲೀನಿಕ್ ವೈದ್ಯರಾದ ಡಾ|ಪ್ರಭಾಚಂದ್ರ ಜೈನ್ ಅಭಿಪ್ರಾಯ ಪಟ್ಟರು.

ಅವರು ನಿನ್ನೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ,ನಿ.ಹಾಗೂ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ, ಇವರ ಸಹಯೋಗದಲ್ಲಿ ಕೆ.ಎಂ.ಸಿ.ಅತ್ತಾವರ ಆಸ್ಪತ್ರೆ ಇವರ ನೇತೃತ್ವದಲ್ಲಿ ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಜರಗಿದ ಲಾಯಲ್ಟಿ ಹೇಲ್ತ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು.ಆರೋಗ್ಯ ಕಾರ್ಡ್ ವಿತರಣೆ ಮಾಡದ ಎ.ಪಿ.ಎಂ.ಸಿ.ಯ ಮಾಜಿ ಸದಸ್ಯ ರತ್ನಕುಮಾರ್ ಚೌಟ ಮಾತಾನಾಡಿ ಬಡವರು ಆಕಸ್ಮಿಕವಾದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಾಲಾದಗ ಹೆಲ್ತ್ ಕಾರ್ಡ್ ಇಲ್ಲದೇ ದುಬಾರಿ ಮೊತ್ತ ಪಾವತಿಸಲು ಕಷ್ಟವಾಗುತ್ತೀದೆ.

ಇಂತಹ ಸಮಯದಲ್ಲಿ ಇಂತಹ ಆರೋಗ್ಯ ಕಾರ್ಡ್ ಗಳು ಸಹಕಾರಿ ಯಾಗಲಿವೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಕಾರ್ಡ್ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿ ಶುಭಾಶಯ ಕೋರಿದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ಮೈಕಲ್ ಡಿ,ಕೋಸ್ತ, ಸಿ.ಎ.ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರತಿ,ಕೆ.ಎಂ.ಸಿ .ಆಸ್ಪತ್ರೆ ಅತ್ತಾವರ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಾರ್ತಿಕ್ ನಾಯಕ್ ಉಪಸ್ತಿತರಿದ್ದರು.

ಸಭೆಯಲ್ಲಿ ಸಿ.ಎ.ಬ್ಯಾಂಕ್ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ಜಾರಪ್ಪ ನಾಯ್ಕ,ಮಂದರಾತಿ ಶೆಟ್ಟಿ, ಅರುಣ ಶೆಟ್ಟಿ, ದಿನೇಶ್ ಪೂಜಾರಿ,ಮಾದವ ಶೆಟ್ಟಿಗಾರ್,ಸಿ.ಎ.ಬ್ಯಾಂಕ್ ಕಾನೂನು ಸಲಹೆಗಾರ ಸುರೇಶ್ ಶೆಟ್ಟಿ,

ರೋಟರಿ ಕ್ಲಬ್ ಸದಸ್ಯರಾದ ಬೋಜ ಮೂಲ್ಯ,ಕೇಶವ ಶಭರಿಸ,ಡಾ!ಕೃಷ್ಣಮೂರ್ತಿ, ಎಚ್.ಎ.ರಹಿಮಾನ್,ಮೋಹನ್ ಜಿ. ಮೂಲ್ಯ,. ನೋಣಯ ಶೆಟ್ಟಿಗಾರ್,ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ. ಎಚ್.ಉಪಸ್ಥಿತರಿದ್ದರು.

ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಸ್ವಾಗತಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋ.ಗಣೇಶ್ ಶೆಟ್ಟಿ ದನ್ಯವಾದ ವಿತ್ತರು.

ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಘುಣಿಯ ಕಾರ್ಯದರ್ಶಿ ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...