Wednesday, January 28, 2026

IAS/KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆಯ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಉದ್ಯೋಗ ಭರವಸೆ ಕೋಶದ ವತಿಯಿಂದ ಒಂದು ದಿನದ IAS/KAS ಸ್ಪರ್ಧಾತ್ಮಕ ಪರೀಕಾ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು.
ಡಾ. ಕೃಷ್ಣಮೂರ್ತಿ, ಶ್ರೀಹರಿ ಕ್ಲೀನಿಕ್, ಸಿದ್ಧಕಟ್ಟೆ ಇವರು ಮಾತನಾಡುತ್ತ, ದೇಶದ ಆಡಳಿತ ವ್ಯವಸ್ಥೆಯಲ್ಲಿ IAS/KAS ಅಧಿಕಾರಿಗಳ ಪಾತ್ರ ಹಿರಿದಾದುದು. ಪ್ರಾಮಾಣಿಕ ಅಧಿಕಾರಿಗಳಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ನೀವು ಇಂತಹ ಸಾಧನೆಯನ್ನು ಮಾಡಿ ಉನ್ನತ ಹುದ್ದೆಗೆ ಏರಬೇಕು ಎಂಬ ಆಶಾಭಾವನೆಯೊಂದಿಗೆ ತರಬೇತಿಯನ್ನು ಉದ್ಘಾಟಿಸುತ್ತಿದ್ದೇನೆ. ಇಂದಿನ ಜಗತ್ತು ಸ್ಪರ್ಧಾತ್ಮಕ ಜಗತ್ತು, ಸ್ಪರ್ಧಾತ್ಮಕ ಜಗತ್ತಿಗೆ ಕಾಲೇಜುಗಳು ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸಲು ಇಂತಹ ತರಬೇತಿಗಳು ಸಹಕಾರಿ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ/ ತರಬೇತಿಗಳ ಅವಶ್ಯಕತೆ ಇರುತ್ತದೆ. ಆದ್ದರಿಂದ ಇಂತಹ ಸ್ಪರ್ಧಾತ್ಮಕ ಪರೀಕಾ ತರಬೇತಿ ಅವರಲ್ಲಿ ಆತ್ಮ ವಿಶ್ವಾಸ ಮೂಡಿಸಿ, ಉನ್ನತ ಹುದ್ದೆಗೆ ಏರಲು ಸಹಕಾರಿಯಾಗುತ್ತದೆ ಎಂದರು. ಸಿದ್ಧಕಟ್ಟೆಯ ಈ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಇಂತಹ ಹತ್ತಾರು ತರಬೇತಿಗಳನ್ನು ಆಯೋಜಿಸುತ್ತಿದೆ. ಅದಕ್ಕಾಗಿ ಕಾಲೇಜಿನ ಪ್ರಾಂಶುಪಾಲರನ್ನು, ಬೋಧಕ ವರ್ಗದವರನ್ನು ಅಭಿನಂದಿಸುತ್ತೇನೆ. ಎಲ್ಲಾ ವಿದ್ಯಾರ್ಥಿಗಳು ತರಬೇತಿಯ ಪೂರ್ಣ ಪ್ರಯೋಜನವನ್ನು ಪಡೆದು ನಮ್ಮ ದೇಶಕ್ಕಾಗಿ ದುಡಿದ ಸಾಧಕರ ಆದರ್ಶಗಳನ್ನು ಪಾಲಿಸಿ, ಬದುಕಿ ಬಾಳಿ ಒಳಿತಾಗಲಿ ಎಂದು ಹಾರೈಸಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಇಂತಹ ಸರಣಿ ತರಬೇತಿಗಳನ್ನು ಆಯೋಜಿಸಲಾಗಿದೆ ಎಂದರು.
ಈ ಶಿಬಿರಕ್ಕೆ ಡಾ. ಮಂದಾರ, ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು, ಶೃಂಗೇರಿ, ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳು IAS/KAS ಪರೀಕ್ಷೆಗೆ ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು, ಈ ಪರೀಕ್ಷೆಗಳನ್ನು ಎದುರಿಸುವುದು ಹೇಗೆ, ಈ ಪರೀಕ್ಷೆಗಳ ಸಾಮಾನ್ಯ ಸ್ವರೂಪ, ಸಂಭಾವ್ಯ ಪ್ರಚಲಿತ ವಿದ್ಯಮಾದ ಪ್ರಶ್ನೆಗಳು ಹಾಗೂ ವಿವಿಧ ವಿಷಯಗಳನ್ನಾಧರಿಸಿ ತರಬೇತಿ ನೀಡಿದರು.
ರಾಜ್ಯದ ವಿವಿಧ ಭಾಗಗಳ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿ ತರಬೇತಿ ನೀಡುವ ಈ ಯೋಜನೆಯನ್ನು ಕಾಲೇಜಿನ ಇಂಗ್ಲೀಷ್ ಭಾಷಾ ಸಹಾಯಕ ಪ್ರಾಧ್ಯಾಪಕರಾದ ವಿನಯ್ ಎಂ. ಎಸ್ ಸಂಯೋಜಿಸಿದರೆ, ಉದ್ಘಾಟನಾ ಸಮಾರಂಭದ ನಿರೂಪಣೆಯನ್ನು ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಂದ್ರೇಶ್ ಎನ್ ನಿರ್ವಹಿಸಿದರು. ಕಾವ್ಯ ತೃತೀಯ ಬಿ.ಎ. ಸ್ವಾಗತಿಸಿದ ಕಾರ್ಯಕ್ರಮದಲ್ಲಿ, ದೀಕ್ಷಿತಾ ತೃತೀಯ ಬಿ.ಎ. ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ನಾಯಕ ಸುಕೇಶ್ ಪ್ರಾರ್ಥಿಸಿದರು. ಎಲ್ಲಾ ಬೋಧಕ, ಬೋಧಕೇತರ ವರ್ಗದವರು ಹಾಜರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...