Thursday, February 13, 2025

ಸಿದ್ಧಕಟ್ಟೆ : ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಭೋಜನಾಲಯ ಹಾಗೂ ಬಯಲು ರಂಗಮಂಟಪದ ಶಂಕು ಸ್ಥಾಪನೆ ಕಾರ್ಯಕ್ರಮ

ಸಿದ್ಧಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಭೋಜನಾಲಯ ಹಾಗೂ ಬಯಲು ರಂಗಮಂಟಪಕ್ಕೆ ಶಂಕು ಸ್ಥಾಪನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ದಮೋದರ ರಾವ್ ಪ್ರಪ್ರಥಮ ಮುಖ್ಯೋಪಾಧ್ಯಯರು ಸರಕಾರಿ ಪ್ರೌಢಶಾಲಾ ಸಿದ್ಧಕಟ್ಟೆ ಇವರು ನೇರವೇರಿಸಿದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಕಾಶ್ ಆಚಾರ್ಯ ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಪೂಂಜ ಇವರು ನಡೆಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮೇಶ್ ಗೌಡ ಇವರು ವಹಿಸಿದರು. ಶಾಲಾ ಉಪಪ್ರಾಂಶುಪಾಲರು ಲೋನಾ ಲೋಬೊ ಇವರು ಪ್ರಾಸ್ತವಿಕ ಮಾತನ್ನು ಆಡಿದರು.

ಶಾಲಾ ಪ್ರಾರಂಭಕ್ಕೆ ಕಾರಣೀಕರ್ತರಾದ ಅರ್ಕಕೀರ್ತಿಯವರು ಈ ಶಾಲೆಯ ಪ್ರಾರಂಭಿಸಿದ ಸಂದರ್ಭದಲ್ಲಿ ಎದುರಿಸಿದ ಸಮಸ್ಯೆಗಳ ಬಗ್ಗೆ ವಿವರಿಸಿದರು ಮತ್ತು ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

ದಮೋದರ ರಾವ್ ಇವರು ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರ್ಕಕೀರ್ತಿ ಇಂದ್ರ, ಮೈಕಲ್ ಡಿ’ಕೋಸ್ತ ರಾಘವೇಂದ್ರ ಭಟ್, ಸುರೇಶ್ ಶೆಟ್ಟಿ ವಕೀಲರು, ಕಿರಣ್ ಮಂಜಿಲ, ವಸಂತ ಕುಮಾರ್ ಅಣ್ಣಳಿಕೆ, ಪ್ರಭಾಕರ ಪ್ರಭು, ಶೇಖರ ಶೆಟ್ಟಿ, ದೇಜಪ್ಪ ಕರ್ಕೇರ ಗ್ರಾಮ ಪಂಚಾಯತ್ ಸದಸ್ಯರು ಸಂಗಬೆಟ್ಟು, ಚಂದ್ರ ಕೋರ್ಯರು ಗ್ರಾಮ ಪಂಚಾಯತ್ ಸದಸ್ಯರು ಕುಕ್ಕಿಪಾಡಿ, ಸುರೇಂದ್ರ ಗ್ರಾಮ ಪಂಚಾಯತ್ ಸದಸ್ಯರು ಆರಂಬೋಡಿ, ಸುರೇಶ್ ಕುಲಾಲ್ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಸಂಗಬೆಟ್ಟು ಉಪಸ್ಥತರಿದ್ದರು. ಎಸ್.ಡಿ.ಎಂ.ಸಿ ಸದಸ್ಯರು ಭಾಗವಹಿಸಿದ್ದರು ಹಾಗೂ ಶಾಲಾ ಶಿಕ್ಷಕರು ಭಾಗವಹಿಸಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...