Sunday, February 1, 2026

ಕರಾಟೆ ವಿದ್ಯಾರ್ಥಿಗಳಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಹಾಗೂ ಶಿಸ್ತನ್ನು ಮೂಡಿಸುತ್ತದೆ- ಮಾಧವ ಅಳಿಕೆ

ಬಂಟ್ವಾಳ: ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಜಾಗೃತಿ ಕೋಶದ ವತಿಯಿಂದ ಇಂದು ವಿದ್ಯಾರ್ಥಿನಿಯರಿಗೆ ಲಿಂಗಸೂಕ್ಷ್ಮ ತರಬೇತಿಯ ಅಂಗವಾಗಿ ’ಇಂಪಾಕ್ಟ್ ಕರಾಟೆ’ ಎಂಬ ಸ್ವರಕ್ಷಣಾ ತಂತ್ರಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಾಗಾರಕ್ಕೆ ತರಬೇತುದಾರರಾಗಿ ಆಗಮಿಸಿದ ಅಂತರರಾಷ್ಟ್ರೀಯ ಕರಾಟೆ ತರಬೇತುದಾರ ಮಾಧವ ಅಳಿಕೆ ಮಾತನಾಡಿ, ಕರಾಟೆಯ ಮಹತ್ವವನ್ನು ತಿಳಿಸಿದರು. ಕರಾಟೆಯು ಭಾರತದ ಮಾರ್ಷಲ್ ಕಲೆಗಳಲ್ಲಿ ಒಂದಾಗಿದ್ದು, ವಿದ್ಯಾರ್ಥಿಗಳಲ್ಲಿ ಸ್ವರಕ್ಷಣೆ ಹಾಗೂ ಬಾಹ್ಯ ಆಕ್ರಮಣದ ವಿರುದ್ಧ ಹೋರಾಡುವ ತಂತ್ರಗಳನ್ನು ಒಳಗೊಂಡಿದೆ. ಅದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಹಾಗೂ ಶಿಸ್ತನ್ನು ಮೂಡಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಜಗತ್ತಿನಲ್ಲಿ ಎದುರಾಗುವ ಆಕ್ರಮಣಕಾರಿ ಹಾಗೂ ವೈವಿಧ್ಯಮಯ ಸವಾಲುಗಳನ್ನು ಎದುರಿಸಲು ಕೌಶಲ್ಯಗಳ ಅಗತ್ಯವಿದೆ. ಕರಾಟೆಯು ಅಂತಹ ವಿದ್ಯೆಗಳಲ್ಲಿ ಒಂದು. ವಿದ್ಯಾರ್ಥಿಗಳಲ್ಲಿ ಭೌತಿಕ, ಬೌದ್ಧಿಕ ಹಾಗೂ ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳುವಲ್ಲಿ ಕರಾಟೆಯು ಸಹಕಾರಿಯಾಗಿದೆ ಎಂದರು.
ಮುಖ್ಯ ತರಬೇತುದಾರ ಮಾಧವ ಅಳಿಕೆ ಹಾಗೂ ಅವರ ಸಹಾಯಕರಾಗಿ ಆಗಮಿಸಿದ್ದ ಕರಾಟೆ ಪಟುಗಳಾದ ರೋಹಿತ್ ಎಸ್.ಎನ್. ಹಾಗೂ ನಿವೇದಿತಾ ೧೬೨ ವಿದ್ಯಾರ್ಥಿನಿಯರಿಗೆ ಒಂದು ದಿನವಿಡಿ ಕರಾಟೆಯ ವಿವಿಧ ತಂತ್ರಗಳನ್ನು ಸ್ವರಕ್ಷಣೆಗೆ ಬಳಸಿಕೊಳ್ಳುವ ಕುರಿತು ತರಬೇತಿ ನೀಡಿದರು.
ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದೇವಿಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಸೀಮಾ ಬೇಗಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಥಮ ಬಿಕಾಂನ ರಕ್ಷಾ ಪ್ರಾರ್ಥಿಸಿದರು. ತೃತೀಯ ಬಿಎ ಸ್ವಾತಿ ಸ್ವಾಗತಿಸಿ, ತೃತೀಯ ಬಿಕಾಂನ ಮೆಲ್ಡ್ರಿಯಾ ಡೀನಾ ಕ್ಯಾಸ್ಟೊಲಿನೊ ವಂದಿಸಿದರು. ದ್ವಿತೀಯ ಬಿಕಾಂನ ಚೈತ್ರ ಕಾರ್ಯಕ್ರಮ ನಿರೂಪಿಸಿದರು,

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...