Wednesday, February 12, 2025

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್: ಟೈಲರಿಂಗ್, ಕಸೂತಿ ಹಾಗೂ ಫ್ಯಾಶನ್ ಡಿಸೈನಿಂಗ್ ತರಬೇತಿ ಆರಂಭ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಭರವಸೆ ಕೋಶ ಹಾಗೂ ವೈಷ್ಣವಿ ಟೈಲರಿಂಗ್ ತರಬೇತಿ ಕೇಂದ್ರ ಸಿದ್ಧಕಟ್ಟೆ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್, ಕಸೂತಿ ಹಾಗೂ ಫ್ಯಾಶನ್ ಡಿಸೈನಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಗಣಿತಶಾಸ್ತ್ರ ಉಪನ್ಯಾಸಕಿ ಸುಮಾ ಕಾರ್ಯಕ್ರಮದ ಉದ್ಘಾಟಿಸಿ, ಮಾತನಾಡಿ, ತರಬೇತಿಯ ಪೂರ್ಣ ಪ್ರಯೋಜನವನ್ನು ಪಡೆದು ಸ್ವಉದ್ಯೋಗಕ್ಕೆ ದಾರಿದೀಪವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ತರಬೇತುದಾರರಾಗಿ ಆಗಮಿಸಿದ ಸಿದ್ಧಕಟ್ಟೆ ವೈಷ್ಣವಿ ಟೈಲರಿಂಗ್ ತರಬೇತಿ ಕೇಂದ್ರದ ಮಾಲಕಿ ಪ್ರೇಮ ಮಾತನಾಡಿ, ವಿದ್ಯಾಭ್ಯಾಸದೊಂದಿಗೆ ವೃತ್ತಿ ಕೌಶಲ್ಯವೂ ಅನಿವಾರ್ಯ. ಶೈಕ್ಷಣಿಕ ಜೀವನದ ನಂತರ ವಿದ್ಯಾರ್ಥಿ ಜೀವನದಲ್ಲಿ ಪಡೆದ ಕಲೆ ಹಾಗೂ ಕೌಶಲ್ಯಗಳು ನಮ್ಮ ಮುಂದಿನ ಜೀವನವನ್ನು ರೂಪಿಸುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಅವರು, ವಿದ್ಯಾರ್ಥಿಗಳಿಗೆ ಎಲ್ಲಾ ಉದ್ಯೋಗಗಳಿಗಿಂತ ಸ್ವಉದ್ಯೋಗ ಶ್ರೇಷ್ಠವಾಗಿದೆ. ವಿದ್ಯಾರ್ಥಿಗಳು ಟೈಲರಿಂಗ್ ಹಾಗೂ ವಸ್ತ್ರ ವಿನ್ಯಾಸದಲ್ಲಿ ಪರಿಣತಿ ಪಡೆದರೆ ತಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿ ನಿಲ್ಲಬಹುದು ಎಂದರು.

ಸಹಾಯಕ ಪ್ರಾಧ್ಯಾಪಕಿ ನಸೀಮಾ ಬೇಗಂ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಸ್ವಾತಿ ಮತ್ತು ತಂಡದವರು ಪ್ರಾರ್ಥಿಸಿದರು ತೃತೀಯ ಬಿಎ ವಿದ್ಯಾರ್ಥಿನಿಯರಾದ ಹರ್ಷಿತಾ ಸ್ವಾಗತಿಸಿ, ಭವ್ಯ ವಂದಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...