Wednesday, January 28, 2026

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್: ಟೈಲರಿಂಗ್, ಕಸೂತಿ ಹಾಗೂ ಫ್ಯಾಶನ್ ಡಿಸೈನಿಂಗ್ ತರಬೇತಿ ಆರಂಭ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಭರವಸೆ ಕೋಶ ಹಾಗೂ ವೈಷ್ಣವಿ ಟೈಲರಿಂಗ್ ತರಬೇತಿ ಕೇಂದ್ರ ಸಿದ್ಧಕಟ್ಟೆ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್, ಕಸೂತಿ ಹಾಗೂ ಫ್ಯಾಶನ್ ಡಿಸೈನಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಗಣಿತಶಾಸ್ತ್ರ ಉಪನ್ಯಾಸಕಿ ಸುಮಾ ಕಾರ್ಯಕ್ರಮದ ಉದ್ಘಾಟಿಸಿ, ಮಾತನಾಡಿ, ತರಬೇತಿಯ ಪೂರ್ಣ ಪ್ರಯೋಜನವನ್ನು ಪಡೆದು ಸ್ವಉದ್ಯೋಗಕ್ಕೆ ದಾರಿದೀಪವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ತರಬೇತುದಾರರಾಗಿ ಆಗಮಿಸಿದ ಸಿದ್ಧಕಟ್ಟೆ ವೈಷ್ಣವಿ ಟೈಲರಿಂಗ್ ತರಬೇತಿ ಕೇಂದ್ರದ ಮಾಲಕಿ ಪ್ರೇಮ ಮಾತನಾಡಿ, ವಿದ್ಯಾಭ್ಯಾಸದೊಂದಿಗೆ ವೃತ್ತಿ ಕೌಶಲ್ಯವೂ ಅನಿವಾರ್ಯ. ಶೈಕ್ಷಣಿಕ ಜೀವನದ ನಂತರ ವಿದ್ಯಾರ್ಥಿ ಜೀವನದಲ್ಲಿ ಪಡೆದ ಕಲೆ ಹಾಗೂ ಕೌಶಲ್ಯಗಳು ನಮ್ಮ ಮುಂದಿನ ಜೀವನವನ್ನು ರೂಪಿಸುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಅವರು, ವಿದ್ಯಾರ್ಥಿಗಳಿಗೆ ಎಲ್ಲಾ ಉದ್ಯೋಗಗಳಿಗಿಂತ ಸ್ವಉದ್ಯೋಗ ಶ್ರೇಷ್ಠವಾಗಿದೆ. ವಿದ್ಯಾರ್ಥಿಗಳು ಟೈಲರಿಂಗ್ ಹಾಗೂ ವಸ್ತ್ರ ವಿನ್ಯಾಸದಲ್ಲಿ ಪರಿಣತಿ ಪಡೆದರೆ ತಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿ ನಿಲ್ಲಬಹುದು ಎಂದರು.

ಸಹಾಯಕ ಪ್ರಾಧ್ಯಾಪಕಿ ನಸೀಮಾ ಬೇಗಂ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಸ್ವಾತಿ ಮತ್ತು ತಂಡದವರು ಪ್ರಾರ್ಥಿಸಿದರು ತೃತೀಯ ಬಿಎ ವಿದ್ಯಾರ್ಥಿನಿಯರಾದ ಹರ್ಷಿತಾ ಸ್ವಾಗತಿಸಿ, ಭವ್ಯ ವಂದಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...