Monday, July 14, 2025

ಸಿದ್ಧಕಟ್ಟೆ ರೋಟರಿ ಕ್ಲಬ್‌ನಿಂದ ಚಾರ್ಟರ್ ಪ್ರೆಸೆಂಟೇಷನ್ – ಹಕ್ಕು ಪತ್ರ ವಿತರಣೆ

ಸಿದ್ಧಕಟ್ಟೆ: ಇಲ್ಲಿನ ಸೈಂಟ್ ಪ್ಯಾಟ್ರಿಕ್ ಚರ್ಚ್ ಸಭಾಭವನದಲ್ಲಿ ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಇದರ ಚಾರ್ಟರ್ ಪ್ರೆಸೆಂಟೇಷನ್ – ಹಕ್ಕು ಪತ್ರ ವಿತರಣಾ ಸಮಾರಂಭ ನಡೆಯಿತು.

ಸೈಂಟ್ ಪ್ಯಾಟ್ರಿಕ್ ಚರ್ಚಿನ ಧರ್ಮಗುರು ಫಾದರ್ ಡೇನಿಯಲ್ ಡಿಸೋಜ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಜಿಲ್ಲೆ 3181ನ ಗವರ್ನರ್ ರೊ.ಮೇಜರ್ ಡೋನರ್ ಎಂ.ರAಗನಾಥ ಭಟ್ ಚಾರ್ಟರ್ ವಿತರಿಸಿದರು.

ಡಿ.ಜಿ.ಇ ರವೀಂದ್ರ ಭಟ್, ಡಿ.ಜಿ.ಎನ್. ಪ್ರಕಾಶ್ ಕಾರಂತ್, ಎ.ಜಿ ಗಳಾದ ಯತಿ ಕುಮಾರಸ್ವಾಮಿ ಗೌಡ, ಸುರೇಂದ್ರ ಕಿಣಿ, ವಿ.ಎಸ್.ದತ್ತ, ಜವರೇಗೌಡ, ವಿವಿಧ ರೋಟರಿ ಕ್ಲಬ್ಬಿನ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಗ್ರಾಮ ಪಂಚಾಯತ್ ಸಂಗಬೆಟ್ಟು ಅಧ್ಯಕ್ಷರಾದ ಸತೀಶ್ ಪೂಜಾರಿ ಅಳಕೆ, ವಿಶೇಷ ಆಹ್ವಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಚುನಾಯಿತರಾದ ರೋಟೇರಿಯನ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ವಿಶೇಷ ಸೇವಾ ಕಾರ್ಯವಾಗಿ ಗ್ರಾಮ ಪಂಚಾಯತ್ ಸಂಗಬೆಟ್ಟಿಗೆ ಆಸನದ ವ್ಯವಸ್ಥೆ ಮತ್ತು ಧ್ವನಿವರ್ಧಕದ ವ್ಯವಸ್ಥೆ ಮಾಡಲಾಯಿತು. ಗುಂಡೂರಿ ಸೇವಾಶ್ರಮಕ್ಕೆ ಶೀಟ್ ಅಳವಡಿಕೆ ಮತ್ತು ಒಂದು ದಿನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಸಿದ್ಧಕಟ್ಟೆಯ ಹೆಸರನ್ನು ಬೆಳಗಿದ ಕುಮಾರಿ ರಮ್ಯಶ್ರೀ ಅವರನ್ನು ಸನ್ಮಾನಿಸಲಾಯಿತು. ಸಿದ್ಧಕಟ್ಟೆ ಕ್ಲಬ್ಬಿನ ಸ್ಥಾಪನೆಗೆ ಕಾರಣರಾದ ಮೂಡಬಿದ್ರೆ ರೋಟರಿ ಅಧ್ಯಕ್ಷರಾದ ಡಾಕ್ಟರ್ ಸುದೀಪ್, ಜಿ.ಎಸ್.ಆರ್ ಜೆರಾಲ್ಡ್ ಡಿಕೋಸ್ತ, ಕಾರ್ಯದರ್ಶಿಗಳಾದ ಅರವಿಂದ ಕಿಣಿ ಇವರನ್ನು ಸನ್ಮಾನಿಸಲಾಯಿತು. ಸಿದ್ಧಕಟ್ಟೆ ರೋಟರಿ ಸಮುದಾಯ ದಳದ ಅಧ್ಯಕ್ಷರಾಗಿದ್ದ ಮಧ್ವರಾಜ್ ಜೈನ್ ಮತ್ತು ಕಾರ್ಯದರ್ಶಿಗಳಾಗಿದ್ದ ಭರತ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.

ಸಿದ್ಧಕಟ್ಟೆ ರೋಟರಿ ಅಧ್ಯಕ್ಷ ಮೈಕಲ್ ಡಿಕೋಸ್ತ ಮತ್ತು ಜ್ಯೋತಿ ದಂಪತಿಯ ಮದುವೆ ವಾರ್ಷಿಕೋತ್ಸವ ಆಚರಿಸಲಾಯಿತು. ಮೂಡುಬಿದರೆ ರೋಟರಿ ಅಧ್ಯಕ್ಷ ರೊ. ಡಾ.ಸುದೀಪ್ ಸ್ವಾಗತಿಸಿ, ಸಿದ್ಧಕಟ್ಟೆ ರೋಟರಿ ಕ್ಲಬ್ಬಿನ ಕಾರ್ಯದರ್ಶಿ ರೊ. ರಾಜೇಶ್ ನೆಲ್ಯಾಡಿ ವಂದಿಸಿದರು. ರೊ. ದಿನೇಶ್ ಸುವರ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...