Monday, February 10, 2025

ಸಿಡಿಲು ಬಡಿದು ವಿದ್ಯುತ್ ವಯರಿಂಗ್ , ಮೂರು ತೆಂಗಿನ ಮರ ಸುಟ್ಟು ಭಸ್ಮ

ಬಂಟ್ವಾಳ: ಸಿಡಿಲು ಬಡಿದು ಮೂರು ತೆಂಗಿನ ಮರ ಸುಟ್ಟು ಮನೆ ಗೊಡೆ ಬಿರುಕು ಬಿಟ್ಟ ಘಟನೆ ಸಜೀಪ ಮುನ್ನೂರು ಅಲಾಡಿ ಎಂಬಲ್ಲಿ ನಡೆದಿದೆ.
ಗ್ರಾ.ಪಂ.ಗೆ ಈ ಬಗ್ಗೆ ವರದಿ ನೀಡಿದ್ದು
ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌

ಬುಧವಾರ ರಾತ್ರಿ ಸುರಿದ ಬಾರಿ ಮಳೆ ಹಾಗೂ ಸಿಡಿಲಿನ ಅಬ್ಬರಕ್ಕೆ ಸಜೀಪ ಮುನ್ನೂರು ಗ್ರಾಮದ ಅಲಾಡಿ ನಿವಾಸಿ ರುಕ್ಮುಯ ಪೂಜಾರಿ ಅವರ ಮನೆಯ ಪಕ್ಕದಲ್ಲಿ ದ್ದ ಮೂರು ತೆಂಗಿನ ಮರಗಳು ಸುಟ್ಟು ಹೋಗಿವೆ, ಮನೆಯೊಳಗೆ ಗೋಡೆ ಬಿರುಕು ಬಿಟ್ಟಿದೆ, ಮನೆಯ ವಿದ್ಯುತ್ ವಯರ್ ಗಳು ಸಂಪೂರ್ಣ ವಾಗಿ ಕೆಟ್ಟು ಹೋಗಿವೆ ಸ್ವಿಚ್ ಬೋರ್ಡುಗಳು ಸುಟ್ಟು ಹೋಗಿವೆ. ಮನೆಯವರಿಗೆ ಯಾವುದೇ ರೀತಿಯ ಅಪಾಯಗಳು ಸಂಭವಿಸಿಲ್ಲ.
ಅದೇ ಹೊತ್ತಿನಲ್ಲಿ ಇವರ ಮನೆಯ ದನ ಕರು ಹಾಕಿದ್ದು , ಸಿಡಿಲಿನ ಅಪಘಾತಕ್ಕೆ ಕರು ಅಸೌಖ್ಯದಿಂದ ಕೂಡಿದೆ.
ಪ್ರಸ್ತುತ ಕರು ಮಲಗಿದ ಸ್ಥಿತಿಯಲ್ಲಿ ಇದೆ.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...