Thursday, February 13, 2025

ಸಿಎಸ್‌ಐಆರ್-ನೆಟ್ ಪರೀಕ್ಷೆ: ಸಿಂಚನಾ ಎಂ.ಎಸ್. ಅವರಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ೨೧ನೇ ರ್‍ಯಾಂಕ್

ವಿಟ್ಲ: ಪುಣಚ ಗ್ರಾಮದ ಮಣಿಲದ ಸಿಂಚನಾ ಎಂ.ಎಸ್. ಅವರು ಜೂನ್ ತಿಂಗಳಲ್ಲಿ ನಡೆದ ಸಿಎಸ್‌ಐಆರ್-ನೆಟ್(ಲೆಕ್ಚರ್‌ಶಿಪ್) ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ದೇಶದಲ್ಲಿಯೇ ೨೧ನೇ ರ್‍ಯಾಂಕ್ ಪಡೆದಿದ್ದಾರೆ.
ಈಕೆ ೨೦೧೯ರಲ್ಲಿ ನಡೆದ ಗೇಟ್(ಗ್ರಾಜ್ಯುಏಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್)ನಲ್ಲಿ ರಾಷ್ಟ್ರಕ್ಕೆ ೧೧೯೮ನೇ ರ್‍ಯಾಂಕ್ ಮತ್ತು ಕೆಎಸ್‌ಇಟಿ (ಕರ್ನಾಟಕ ಸ್ಟೇಟ್ ಎಲಿಜಿಬಿಲಿಟಿ ಟೆಸ್ಟ್)ನಲ್ಲಿ ೨೦೧೯ರಲ್ಲಿ ಉತ್ತೀರ್ಣರಾಗಿದ್ದಾರೆ. ಶಿ-ಇನ್‌ಸ್ಪೈರ್ ಸ್ಕಾಲರ್‌ಶಿಪ್‌ಅನ್ನು ಕೂಡಾ ಆಕೆ ಪಡೆದಿದ್ದರು.
ಈಕೆ ಪುಣಚ ಪರಿಯಾಲ್ತಡ್ಕ ಹಿ.ಪ್ರಾ ಶಾಲೆ ಮತ್ತು ಪುತ್ತೂರು ಮಾಯಿದೆ ದೇವುಸ್ ಹಿ ಪ್ರಾ.ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸಂತ ಫಿಲೋಮಿನ ಪ.ಪೂ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಪದವಿ ಕಾಲೇಜಿನಲ್ಲಿ ಪದವಿ, ಮಂಗಳಗಂಗೋತ್ರಿ ಕೊಣಾಜೆ ವಿವಿಯಲ್ಲಿ ಎಂ.ಎಸ್ಸಿ. ಶಿಕ್ಷಣವನ್ನು ಪಡೆದಿದ್ದಾರೆ.
ಈಕೆ ಪುತ್ತೂರು ಮಾಯಿದೆ ದೇವುಸ್ ಹಿ.ಪ್ರಾ ಶಾಲೆಯ ಶಿಕ್ಷಕ, ಪುಣಚ ಗ್ರಾಮದ ಮಣಿಲ ಸುಬ್ಬರಾಜ ಶಾಸ್ತ್ರಿ ಮತ್ತು ಜ್ಯೋತಿ ದಂಪತಿಯ ಪುತ್ರಿ.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...