Saturday, June 28, 2025

ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಘಟಕ-ಕ್ಯಾಂಪಸ್ ವಿಂಗ್: ಈದ್ ಕಿಟ್ ವಿತರಣೆ, ಶಾಲಾ-ಮದ್ರಸ ವಿದ್ಯಾರ್ಥಿಗಳಿಗೆ ಸನ್ಮಾನ

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಘಟಕ ಮತ್ತು ಕ್ಯಾಂಪಸ್ ವಿಂಗ್ ಇದರ ವತಿಯಿಂದ 5ನೆ ವರ್ಷದ ರಮಝಾನ್ ಪ್ರಯುಕ್ತ ಈದ್‌ಕಿಟ್ ವಿತರಣೆ ಹಾಗೂ ಶಾಲಾ-ಮದ್ರಸ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಬಂಟ್ವಾಳ ಪೇಟೆಯ ಶೈಮ್ ಅಪಾರ್ಟ್ ಬಳಿ ನಡೆಯಿತು.
ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯದ ಅಧ್ಯಕ್ಷ ಇರ್ಶಾದ್ ದಾರಿಮಿ ದುಆಃ ನೆರವೇರಿಸಿದರು. ಬಂಟ್ವಾಳ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಡ್ಯಾರ್ ಕಣ್ಣೂರು ಜುಮಾ ಮಸೀದಿಯ ಮುದರ್ರಿಸ್ ಅನ್ಸಾರ್ ಫೈಝಿ “ತೌಬಾ” ವಿಷಯದ ಕುರಿತು ಮುಖ್ಯ ಪ್ರಭಾಷಣ ಮಾಡಿದರು.
ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಈದ್ ಕಿಟ್ ವಿತರಿಸಿದರು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಗಳಿಸಿದ 16 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ರಿಯಾಝ್ ಹುಸೈನ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಅದೇ ರೀತಿ ಮದ್ರಸ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಮನಾರುಲ್ ಇಸ್ಲಾಂ ಮದ್ರಸದ 16 ವಿದ್ಯಾರ್ಥಿಗಳಿಗೆ ಬಂಟ್ವಾಳ ಜಮಾಅತ್ ಕಮಿಟಿ ಅಧ್ಯಕ್ಷ ಹೈದರ್ ಅಲಿ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ವೇಳೆ ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್ ಅವರನ್ನು ಸನ್ಮಾನಿಸಲಾಯಿತು.
ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಘಟಕದ ಅಧ್ಯಕ್ಷ ಇಸ್ಮಾಯಿಲ್ ಅರಬಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬಂಟ್ವಾಳ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಅಬ್ದುಲ್ ಖಾದರ್ ಮಾಸ್ಟರ್, ಮಸೀದಿಯ ಖತೀಬ್ ಅಬ್ದುಲ್ ಹನೀಫಿ, ಸದರ್‌ಮುಹಲ್ಲಿ ಸಿದ್ದೀಕ್ ರಹ್ಮಾನಿ, ಶೈಮ್ ಗ್ರೂಪ್‌ನ ಮಾಲಕ ಮುಹಮ್ಮದ್ ಇಕ್ಬಾಲ್, ಬಿ.ಎಂ. ಬದ್ರುದ್ದೀನ್ ಉಪಸ್ಥಿತರಿದ್ದರು. ಜಮಾಅತ್‌ನ ೫೦ ಮನೆಗಳಿಗೆ ಈದ್ ಕಿಟ್ ವಿತರಿಸಲಾಯಿತು.
ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಘಟಕದ ಉಪಾಧ್ಯಕ್ಷ ಅನ್ವರ್ ಅಝ್ಹರಿ ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ವಂದಿಸಿ, ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಎಂ.ಸವಾಝ್ ಬಂಟ್ವಾಳ ಸಹಕರಿಸಿದರು.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...