Wednesday, February 12, 2025

ತುಂಬೆ: ಎಸ್.ವೈ.ಎಸ್. ನೂತನ ಶಾಖೆ ಅಸ್ತಿತ್ವಕ್ಕೆ

ಬಂಟ್ವಾಳ: ತುಂಬೆ ಎಸ್. ವೈ ಎಸ್. ಶಾಖೆಯ 2020-22ನೇ ಸಾಲಿನ ನೂತನ ಶಾಖಾ ರಚನಾ ಸಭೆಯು ಇತ್ತೀಚೆಗೆ ಎಸ್ಕೆಎಸ್ಸೆಸ್ಸೆಫ್ ತುಂಬೆ ಶಾಖಾ ಕಚೇರಿಯಲ್ಲಿ ನಡೆಯಿತು.

ಜಂ ಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರಾದ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ತುಂಬೆ ಶಾಖೆಯ ನೂತನ ಅಧ್ಯಕ್ಷ ಮುಹಮ್ಮದ್ ಇಸಾಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುರ್ರಹ್ಮಾನ್ ಹದ್ದಾದಿ, ಉಪಾಧ್ಯಕ್ಷರಾಗಿ ಟಿ.ಕೆ.ಶರೀಫ್, ಹಮೀದ್ ಕಾಣೆಮ್ಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಪೆರ್ನೆ, ಕೋಶಾಧಿಕಾರಿಯಾಗಿ ಮುಹಮ್ಮದ್ ಶಾಫಿ ಕಾಲನಿ, ಜೊತೆ ಕಾರ್ಯದರ್ಶಿಯಾಗಿ ಹನೀಫ್ ಉಜಿರೆಪಲ್ಲ, ಟಿ.ಎಸ್.ರಮ್ಲಾನ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಫಯಾಝ್, ಹಕೀಂ ರೋಯಲ್, ಹಂಝ ಕುಂಪನ ಮಜಲ್, ಉಬೈದ್ ತುಂಬೆ, ರಹಿಮಾನ್ ಬಡಕಬೈಲ್, ಹಕೀಂ ಪೇರ್ಲಬೈಲ್, ಹನೀಫ್ ಬೊಳ್ಳಾರಿ ಹಾಗೂ ಮಂಡಲ ಕೌನ್ಸಿಲರ್ಸ್ ಗಳಾಗಿ ಹಾಜಿ ಅಬ್ದುರ್ರಹ್ಮಾನ್ ಹದ್ದಾದಿ, ಅಬ್ದುಲ್ ಹಮೀದ್ ಪೆರ್ನೆ ಹಾಗೂ ಹಕೀಂ ರೋಯಲ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಟಿ.ಎಂ.ಹನೀಫ್ ಮುಸ್ಲಿಯಾರ್, ಅಬ್ದುಲ್ ಸಲಾಂ ಮಿತ್ತಬೈಲ್ ಕಾರ್ಯನಿರ್ವಹಿಸಿದರು.

ಸಭೆಯಲ್ಲಿ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ದಾವೂದ್ ಇಬ್ರಾಹಿಂ ಅವರನ್ನು ಹಾಗೂ ನೂತನ ಎಸ್. ವೈ. ಎಸ್. ಅಧ್ಯಕ್ಷರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ನ ಕೋ ಆರ್ಡಿನೇಟರ್ ಮುಹಮ್ಮದ್ ಅಲಿ, ಎಸ್ಕೆಎಸ್ಸೆಸ್ಸೆಫ್ ತುಂಬೆ ಶಾಖೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಊರಿನ ಹಿರಿಯ ವ್ಯಕ್ತಿಗಳು ಉಪಸ್ಥಿತರಿದ್ದರು. ಎಸ್ಕೆಎಸ್ಸೆಸ್ಸೆಫ್ ತುಂಬೆ ಶಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಖಲಂದರ್ ಸ್ವಾಗತಿಸಿ, ನಿರೂಪಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...