Tuesday, February 11, 2025

ಕನ್ಯಾನದಲ್ಲಿ ಎಸ್ಕೆಎಸ್ಸೆಸ್ಸೆಫ್ ಮಹಾಸಂಗಮಕ್ಕೆ ಸಾಕ್ಷಿಯಾದ ಜನಸಾಗರ!

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಕನ್ಯಾನ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಏಕದಿನದ ಮತಪ್ರವಚನ, ಮಜ್ಲಿಸ್‌ನ್ನೂರ್ ಹಾಗೂ ಮಹಾಸಂಗಮ ಕನ್ಯಾನದ ಗೋಳಿಕಟ್ಟೆಯ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾ ನಗರದ ಶಂಸುಲ್ ಉಲಮಾ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆಯಿತು.
ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಮಹಾಸಂಗಮವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ದುಆಃ ನೆರವೇರಿಸಿದರು.
ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸೈಯದ್ ಬಾತಿಷ ತಂಙಳ್ ಆನೆಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸಾಲೆತ್ತೂರು ಖತೀಬ್ ಮಜೀದ್ ದಾರಿಮಿ ಕುಂಬ್ರ ಪ್ರಸ್ತಾವಿಸಿ, ಸಮಸ್ತದ ನಡೆದು ದಾರಿಯ ಬಗ್ಗೆ ಮೆಲುಕುಹಾಕಿದರು.
ಅಂತರಾಷ್ಟ್ರೀಯ ಪ್ರಭಾಷಣಗಾರ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಅವರು ಮುಖ್ಯ ಪ್ರಭಾಷಣ ಮಾಡಿದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಸಮಸ್ತದ ಆದರ್ಶಗಳ ಬಗ್ಗೆ ಮಾತನಾಡಿದರು.

ವಾರ್ಷಿಕೋತ್ಸವಕ್ಕೆ ಚಾಲನೆ:
ಮಂಗಳವಾರ ಬೆಳಿಗ್ಗೆ ಸ್ವಾಗತ ಸಮಿತಿ ಚೇಯರ್ಮೆನ್ ಎಸ್.ಕೆ.ಉಮರ್ ಉಸ್ತಾದ್ ಕನ್ಯಾನ ಧ್ವಜಾರೋಹಣ ನೆರವೇರಿಸಿ, ವಾಷಿಕೋತ್ಸವಕ್ಕೆ ಚಾಲನೆ ನೀಡಿದರು. ಸಂಜೆ ಕೆ.ಎಸ್. ಅಲಿ ತಂಙಳ್ ಕುಂಬೋಲ್ ನೇತೃತ್ವದಲ್ಲಿ ಶಾಹುಲ್ ಹಮೀದ್ ವಲಿಯುಲ್ಲಾಹಿ (ರ.ಅ) ಝಿಯಾರತ್ ನಡೆಯಿತು. ಬಳಿಕ ಎಸ್ಕೆಐಎಂವಿ ಬೋರ್ಡ್‌ನ ಕಾರ್ಯದರ್ಶಿ ಶೈಖುನಾ ಎಂ.ಎ. ಖಾಸಿಂ ಉಸ್ತಾದ್ ನೇತೃತ್ವದಲ್ಲಿ ಮಜ್ಲಿಸ್‌ನ್ನೂರ್ ನಡೆಯಿತು. ಸಮಸ್ತ ಕರ್ನಾಟಕ ಮುಶಾವರ ಕಾರ್ಯದರ್ಶಿ ಶೈಖುನಾ ಬಿ.ಕೆ. ಅಬ್ದುಲ್ ಖಾದರ್ ಖಾಸಿಮಿ ಪ್ರವಚನ ಮಾಡಿದರು.
ವೇದಿಕೆಯಲ್ಲಿ ಸೈಯದ್ ಹಾದಿ ತಂಙಳ್ ಮೊಗ್ರಾಲ್, ಸೈಯದ್ ಜಿಫ್ರಿ ತಂಙಳ್ ಆತೂರು, ಸೈಯದ್ ಅಮೀರ್ ತಂಙಳ್ ಕಿನ್ಯ, ಶೈಖುನಾ ಅಹ್ಮದ್ ಮುಸ್ಲಿಯಾರ್, ಖಾಸಿಂ ದಾರಿಮಿ ಕಿನ್ಯಾ, ಅಬ್ದುಲ್ ರಶೀದ್ ಹಾಜಿ, ಆಸೀಫ್ ಅಬ್ದುಲ್ಲ ಉಳ್ಳಾಲ, ಉಳ್ಳಾಲ ಎಸ್‌ಎಂಎ ಕಾಜೇಜಿನ ಪ್ರಾಂಶುಪಾಲ ಉಸ್ಮಾನ್ ಫೈಝಿ ತೋಡಾರು, ಹಾರೂನ್ ಅಹ್ಸನಿ, ಖಾಸಿಂ ದಾರಿಮಿ ಕಿನ್ಯ, ಹಮೀದ್ ಮುಸ್ಲಿಯಾರ್ ಕೊನಾಲೆ ಕನ್ಯಾನ, ಮಜೀದ್ ದಾರಿಮಿ, ಮಾಹಿನ್ ದಾರಿಮಿ ಪಾತೂರು, ಅಬ್ದುಲ್ ರಝಾಕ್ ಮಿಸ್ಬಾಹಿ, ಶರೀಫ್ ಫೈಝಿ ಕಡಬ, ಅಬ್ದುಲ್ ರಹ್ಮಾನ್ ತಬೂಕ್, ಮುಹಮ್ಮದ್ ಫೈಝಿ ಕಜೆ, ಅಬ್ದುಲ್ ರಹ್ಮಾನ್ ಹೈತಮಿ, ಶರೀಫ್ ಮುಸ್ಲಿಯಾರ್ ಕಜೆ, ಜಮಾಲುದ್ದೀನ್ ದಾರಿಮಿ ಗಡಿಯಾರ, ಇಸ್ಮಾಯಿಲ್ ಹಾಜಿ ಕಲ್ಕಾರ್, ಇಸ್ಮಾಯಿಲ್ ಹಾಜಿ ಬಾಳೆಕೋಡಿ, ಅಶ್ರಫ್ ಗೋಳಿಕಟ್ಟೆ, ರಶೀದ್ ಹಾಜಿ ಪರ್ಲಡ್ಕ, ಹನೀಫ್ ಹಾಜಿ ಬಂದರ್, ಉಸೈನ್ ದಾರಿಮಿ ರೆಂಜಿಲಾಡಿ, ಇಬ್ರಾಹಿಂ ಕಡವ, ಶರೀಫ್ ಕೆಳಿಂಜ, ಆರಿಫ್ ಕರಾಯಿ, ಎಂ.ಎಸ್. ಮುಹಮ್ಮದ್ ಉಪಸ್ಥಿತರಿದ್ದರು.
ಕೆ.ಎಂ.ನಝೀರ್ ದಾರಿಮಿ ಕನ್ಯಾನ ಕಿರಾಅತ್ ಪಠಿಸಿದರು. ಸ್ವಾಗತ ಸಮಿತಿಯ ಕನ್ವೀನರ್ ಕೆ.ಕೆ.ರಫೀಕ್ ಫೈಝಿ ಸ್ವಾಗತಿಸಿ, ಕಲಂದರ್ ಕುಕ್ಕಾಜೆ ವಂದಿಸಿ, ನಿಝಾಂ ಅನ್ಸಾರಿ ನಿರೂಪಿಸಿದರು.

More from the blog

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...