Thursday, June 26, 2025

ಕಿರು ಉದ್ದಿಮೆಗಳಿಗೆ 10 ಲಕ್ಷ ಸಹಾಯಧನ

ಮಂಗಳೂರು, ಅ.18.(ಕ.ವಾ):- ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಕಾರ್ಯಕ್ರಮದಡಿ ವೈಯಕ್ತಿಕ ಕಿರು ಉದ್ದಿಮೆಗಳಿಗೆ 10 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅವಕಾಶವಿದೆ.
ಯೋಜನೆಯಡಿ ಮೀನಿನ ಖಾದ್ಯಗಳಾದ ಚಟ್ನಿ ಪುಡಿ, ಉಪ್ಪಿನಕಾಯಿ, ಚಕ್ಕುಲಿ, ಸೆಂಡಿಗೆ, ಚಿಪ್ಸ್, ರೋಟಿ, ಇತ್ಯಾದಿಗಳನ್ನು ತಯಾರಿಸುವುದು, ಮೀನÀನ್ನು ಭಾಗಗಳಾಗಿ ಮಾಡಿ ಫಿಲ್ಲೆಟ್ಸ, ಸ್ಟೀಕ್ಸ್ ಮಾದರಿಯಲ್ಲಿ ಶೀತಲೀಕರಿಸಿ, ಮಾರಾಟ ಮಾಡುವುದು, ಮೀನನ್ನು ಉಪ್ಪು ಹಾಕಿ ಅಥವಾ ಉಪ್ಪಿಲ್ಲದೇ ಆಧುನಿಕ ರೀತಿಯಲ್ಲಿ ಒಣಗಿಸುವುದು ಹಾಗೂ ಇವುಗಳನ್ನು ಆಕರ್ಷಕ ರೀತಿಯಲ್ಲಿ ಪ್ಯಾಕ್ ಮಾಡಿ, ಲೇಬಲ್ ಮಾಡಿ ಮಾರಾಟ ಮಾಡಬಹುದಾಗಿದೆ.
ಆಸಕ್ತರು ಜಿಲ್ಲಾ ಪಂಚಾಯತ್‍ನಲ್ಲಿರುವ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...