Saturday, June 28, 2025

ನಾಳೆ ಕಂಕಣ ಸೂರ್ಯಗ್ರಹಣ

ಬಂಟ್ವಾಳ: ದೇಶದಲ್ಲಿ ಈಗಾಗಲೇ ಎರಡು ಚಂದ್ರಗ್ರಹಣಗಳನ್ನು ಕಂಡು ಈ ಆದಿತ್ಯವಾರ (ನಾಳೆ) ವರ್ಷದ ಮೊದಲ ಸೂರ್ಯಗ್ರಹಣ ಗೋಚರಿಸಲಿದೆ.

ಸುಮಾರು 6 ಗಂಟೆಗಳ ಕಾಲ ಕಂಕಣ ಸೂರ್ಯಗ್ರಹಣವನ್ನು ಕಣ್ತುಂಬಿಕೊಳ್ಳುವ ಅವಕಾಶ ಭಾರತ ಸೇರಿದಂತೆ ಜಗತ್ತಿನ ಹಲವು ಪ್ರದೇಶಗಳ ಜನರಿಗೆ ಸಿಕ್ಕಿದೆ.

ಗ್ರಹಣ ಜೂನ್‌ 21ರ ಭಾನುವಾರ ದಂದು ಸಮಯ: ಬೆಳಗ್ಗೆ 9.15ಕ್ಕೆ ಆರಂಭ,  12.10ರ ವೇಳೆಗೆ ಪೂರ್ಣ, ಮಧ್ಯಾಹ್ನ 3.04ಕ್ಕೆ ಅಂತ್ಯ. ಒಟ್ಟಾರೆ ಗ್ರಹಣದ ಅವಧಿ: 6 ಗಂಟೆಗಳು.

ಎಲ್ಲೆಲ್ಲಿ ಗೋಚರ?
ಭಾರತ, ಆಫ್ರಿಕನ್‌ ರಿಪಬ್ಲಿಕ್‌, ಕಾಂಗೋ, ಇಥಿಯೋಪಿಯಾ, ಪಾಕಿಸ್ತಾನ ಮತ್ತು ಚೀನ

ಭಾರತದಲ್ಲಿ
ರಾಜಸ್ಥಾನ, ಹರ್ಯಾಣ ಮತ್ತು ಉತ್ತರಾಖಂಡದಲ್ಲಿ ಖಂಡಗ್ರಾಸ ಗ್ರಹಣ ಹಾಗೂ ಉಳಿದೆಡೆ ಭಾಗಶಃ ಗ್ರಹಣ ಗೋಚರ

ಮುನ್ನೆಚ್ಚರಿಕೆ ಕ್ರಮಗಳು
ದೇಶದ ಕೆಲವೆಡೆ ಖಂಡಗ್ರಾಸ, ಮತ್ತೆ ಕೆಲವೆಡೆ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ. ಇದನ್ನು ಬರಿಗಣ್ಣಿನಿಂದ ನೋಡಲೇಬಾರದು. ಸುರಕ್ಷಾ ಕನ್ನಡಕ ಧರಿಸಿ ಅಥವಾ ಪರೋಕ್ಷ ವೀಕ್ಷಣಾ ವಿಧಾನಗಳನ್ನು ಅನುಸರಿಸಿಯೇ ಈ ಗ್ರಹಣವನ್ನು ಕಣ್ತುಂಬಿಕೊಳ್ಳಬಹುದು.

ಮುಂದಿನ ಸೂರ್ಯಗ್ರಹಣ ಯಾವಾಗ?
ಮುಂದಿನ ಸೂರ್ಯಗ್ರಹಣವು ಡಿಸೆಂಬರ್‌ 14 – 15ರಂದು ಸಂಭವಿಸಲಿದೆ. ಅದು ಸಂಪೂರ್ಣ ಸೂರ್ಯಗ್ರಹಣವಾಗಿರಲಿದ್ದು, ಚಂದ್ರನು ಸಂಪೂರ್ಣವಾಗಿ ಸೂರ್ಯನನ್ನು ಆವರಿಸಿಕೊಳ್ಳುತ್ತಾನೆ. ಈ ಖಗೋಳ ವಿದ್ಯಮಾನವು ಚಿಲಿ ಮತ್ತು ಅರ್ಜೆಂಟೀನಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...