Wednesday, January 28, 2026

ಮೊಡಂಕಾಪು ಮಸ್ಟರಿಂಗ್ ಮತ್ತು ಡಿ.ಮಸ್ಟರಿಂಗ್ ಕೇಂದ್ರ ಕ್ಕೆ ಎಸ್.ಪಿ.ಲಕ್ಮೀಪ್ರಸಾದ್ ಬೇಟಿ

ಬಂಟ್ವಾಳ: ಎ.18 ರಂದು ನಡೆಯುವ ಲೋಕಸಭಾ ಚುನಾವಣೆಯ ಬಗ್ಗೆ ಹೆಚ್ಚುವರಿ ಭದ್ರತಾ ದೃಷ್ಟಿಯಿಂದ ಮಂಗಳೂರು ಎಸ್.ಪಿ.ಲಕ್ಮೀಪ್ರಸಾದ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮೊಡಂಕಾಪು ಮಸ್ಟರಿಂಗ್ ಮತ್ತು ಡಿ.ಮಸ್ಟರಿಂಗ್ ಕೇಂದ್ರ ಕ್ಕೆ ಬೇಟಿ ನೀಡಿ ಅಲ್ಲಿನ ವ್ಯವಸ್ಥೆ ಯ ಬಗ್ಗೆ ಪೋಲೀಸರೊಂದಿಗೆ ಚರ್ಚೆ ನಡೆಸಿ ಯಾವ ರೀತಿಯ ಕ್ರಮಗಳನ್ನು ಕೈಕೊಳ್ಳಬೇಕು, ಸಮಸ್ಯೆ ಗಳು ಉದ್ಬವವಾಗದ ರೀತಿಯಲ್ಲಿ ಕಾರ್ಯನಿರ್ವಹಿಸುವ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿದ ಎಸ್.ಪಿ‌.ಲಕ್ಮೀಪ್ರಸಾದ್ ಎಲ್ಲರೂ ಶಾಂತಿರೀತಿಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದರು.
70 ಸೆಕ್ಟರ್ ಗಳಿಗೆ
287 ಸಿಬ್ಬಂದಿ ಗಳನ್ನು ಹಾಕಲಾಗಿದೆ.  ಪೋಲೀಂಗ್ ಬೂತ್ ಮತ್ತು ಸೆಕ್ಟರ್ ಗಳಿಗೆ ಸೇರಿ ಹಾಕಲಾಗಿದೆ.
85 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ ಅಲ್ಲಿಗೆ ಸಿಬ್ಬಂದಿ ಗಳ ಜೊತೆ ಹೆಚ್ಚು ವರಿಯಾಗಿ ಸಿ.ಆರ್.ಪಿ.ಗಳನ್ನು ಹಾಕಲಾಗಿದೆ.
ಎರಡು ಹೆಚ್ಚುವರಿ ಯಾಗಿ ಬಂಟ್ವಾಳ ಕ್ಕೆ ಕೆ.ಎಸ್.ಆರ್.ಪಿ.ಜೊತೆಗೆ ಹೋಮ್ ಗಾರ್ಡ್ ಸೇರಿದಂತೆ 300 ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಾರೆ.
ಇದರಲ್ಲಿ ಎರಡು ಡಿ.ವೈ.ಎಸ್.ಪಿ.ಗಳು ಹಾಗೂ ನಾಲ್ಕು ಪೋಲೀಸ್ ಇನ್ಸ್ ಪೆಕ್ಟರ್ಗಳು ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತರೀತಿಯಲ್ಲಿ ಮತದಾನ ಅಗುವಂತೆ ಎಲ್ಲಾ ರೀತಿಯಲ್ಲಿ ಪೋಲೀಸ್ ವ್ಯವಸ್ಥೆ ಮಾಡಲಾಗಿದೆ.
ಮತದಾರರು ಯಾವುದೇ ಭಯವಿಲ್ಲದೆ ಮತದಾನ ಮಾಡುವಂತೆ ಅವರು ಹೇಳಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...