Thursday, June 26, 2025

ಎಸ್ಸೆಸ್ಸೆಫ್ ಹಿಂದ್ ಸಫರ್ ಫೆ. ೫ಕ್ಕೆ ಪುತ್ತೂರಿಗೆ

ಬಂಟ್ವಾಳ, ಫೆ. ೨: ಅಂತಾರಾಷ್ಟ್ರೀಯ ಮುಸ್ಲಿಂ ವಿದ್ವಾಂಸ ಸುಲ್ತಾನುಲ್ ಉಲಮಾ ಶೈಖ್ ಅಬೂಬಕರ್ ಅಹ್ಮದ್ ಎಪಿ ಉಸ್ತಾದ್ ಅವರ ನಿರ್ದೇಶನದಲ್ಲಿ ಅಖಿಲ ಭಾರತ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(ಎಸ್ಸೆಸ್ಸೆಫ್) ವತಿಯಿಂದ ಕಾಶ್ಮೀರದಿಂದ ಪ್ರಾರಂಭಗೊಂಡು ಕೇರಳದಲ್ಲಿ ಸಮಾರೋಪಗೊಳ್ಳಲಿರುವ ‘ಹಿಂದ್ ಸರ್’ ಭಾರತ ಯಾತ್ರೆಯು ಫೆ. ೫ರಂದು ಮಧ್ಯಾಹ್ನ ೩:೩೦ಕ್ಕೆ ಪುತ್ತೂರಿನ ದರ್ಬೆ ತಲುಪಲಿದೆ ಎಂದು ಎಸ್ಸೆಸ್ಸೆಫ್ ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ತಿಳಿಸಿದ್ದಾರೆ.
ಅವರು ಶನಿವಾರ ಬಿ.ಸಿ.ರೋಡ್‌ನಲ್ಲಿರುವ ಎಸ್ಸೆಸ್ಸೆಫ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದರ್ಬೆಯಿಂದ ಎಸ್ಸೆಸ್ಸೆಫ್ ರೈಟೀಂ, ಎಸ್‌ವೈಎಸ್ ಇಸಾಬ, ಮುಅಲ್ಲಿಂ ಮಸೀರ ಸಹಿತ ೩ ಸಾವಿರ ಕಾರ್ಯಕರ್ತರಿಂದ ಆಕರ್ಷಕ ಜಾಥಾವು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಕಿಲ್ಲೆ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ ಎಂದು ಮಾಹಿತಿ ನೀಡಿದರು,
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸೈಯದ್ ಮನ್ಸರ್ ತಂಙಳ್ ಜಾಥಾವನ್ನು ಉದ್ಘಾಟಿಸುವರು, ಖುರ್ರತುಸ್ಸಾದಾತ್ ಸೈಯದ್ ಕೂರತ್ ತಂಙಳ್ ಪ್ರಾರ್ಥನೆ ನೆರವೇರಿಸುವರು. ಝೈನುಲ್ ಉಲೆಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸುವರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಕಶ್ಮೀರಿ, ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಿದ್ದೀಖ್ ಮೋಂಟುಗೋಳಿ, ಅಖಿಲ ಭಾರತ ಎಸ್ಸೆಸ್ಸೆಫ್ ಉಪಾಧ್ಯಕ್ಷ ಡಾ. ಮುಹಮ್ಮದ್ ಫಾರೂಖ್ ನಹೀಮಿ ಕೊಲ್ಲಂ ಮುಖ್ಯ ಪ್ರಭಾಷಣ ಮಾಡುವರು ಎಂದು ಮಾಹಿತಿ ನೀಡಿದರು.
‘ಸಹಿಷ್ಣುತೆ ಮತ್ತು ಸಾಕ್ಷರತೆಯ ಭಾರತ’ ಎಂಬ ಘೋಷಣೆಯೊಂದಿಗೆ ಕಾಶ್ಮೀರದಿಂದ ಹೊರಟ ಹಿಂದ್ ಸರ್ ನೂರಕ್ಕೂ ಹೆಚ್ಚು ಕೇಂದ್ರಗಳ ಮೂಲಕ ಸಾಗಲಿದ್ದು, ಕರ್ನಾಟಕದ ಹುಬ್ಬಳ್ಳಿ, ಬೆಂಗಳೂರು, ಮೈಸೂರು, ಮಡಿಕೇರಿ ನಗರಗಳ ಮೂಲಕ ಬಂದು ಫೆ.೫ರಂದು ದ.ಕ. ಜಿಲ್ಲೆಯ ಪುತ್ತೂರು ನಗರ ತಲುಪಲಿದೆ ಎಂದರು.
ಫೆ.೭ರಂದು ಕೇರಳದ ಕಲ್ಲಿಕೋಟೆಯಲ್ಲಿ ಹಿಂದ್ ಸರ್ ಸಮಾರೋಪಗೊಳ್ಳಲಿದ್ದು, ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ ಪ್ರ.ಕಾರ್ಯದರ್ಶಿ ಕಾಂತಪುರಂ ಎ.ಪಿ.ಉಸ್ತಾದ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶರೀಫ್ ನಂದಾವರ, ಉಪಾಧ್ಯಕ್ಷ ಮಜೀದ್ ಹಾಫಿಳ್ ಗಾಣೆಮಾರ್, ಕಾರ್ಯದರ್ಶಿ ಅಬ್ದುಲ್ ರಶೀದ್ ಹಾಜಿ ವಗ್ಗ ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...