Wednesday, July 9, 2025

ಕೊಯಿಲ ಸರ್ಕಾರಿ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ. ಮರು ಮೌಲ್ಯಮಾಪನ: ಇಬ್ಬರು ಸಹೋದರಿಯರಿಗೆ ಹೆಚ್ಚುವರಿ ಅಂಕ

ಬಂಟ್ವಾಳ: ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಇಬ್ಬರು ಸಹೋದರಿಯರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮರು ಮೌಲ್ಯಮಾಪನದಿಂದ ಹೆಚ್ಚುವರಿ ಅಂಕ ದೊರೆತಿದ್ದು, ಇತರ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣದಿಂದ ಉತ್ತೀರ್ಣಗೊಂಡಿದ್ದಾರೆ.
ಈ ಹಿಂದೆ ಒಟ್ಟು 609 ಅಂಕ ಗಳಿಸಿದ್ದ ವಿದ್ಯಾರ್ಥಿನಿ ಗೀತಾ ಎಚ್. ಈಕೆಗೆ ಮರು ಮೌಲ್ಯಮಾಪನದಿಂದ ಒಟ್ಟು 615 (ಶೇ. 98.40)  ಅಂಕ ದೊರೆತು ಜಿಲ್ಲೆಯಲ್ಲೇ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಕನ್ನಡ ವಿಷಯದಲ್ಲಿ-124 ರ ಬದಲಿಗೆ 125, ಗಣಿತ-97ರ ಬದಲಿಗೆ 98, ಇಂಗ್ಲೀಷ್-94ರ ಬದಲಿಗೆ 95, ಹಿಂದಿ-95ರ ಬದಲಿಗೆ 98 ಅಂಕ ಸಿಕ್ಕಿದೆ.
ಇನ್ನೊಂದೆಡೆ ಈ ಹಿಂದೆ ಒಟ್ಟು ೫೯೬ ಅಂಕ ಗಳಿಸಿದ್ದ ವಿದ್ಯಾರ್ಥಿನಿ ಲತಾ ಎಚ್. ಈಕೆಗೆ ಮರು ಮೌಲ್ಯಮಾಪನದಿಂದ ಒಟ್ಟು 603 ಅಂಕ ದೊರೆತಿದೆ.
ಕನ್ನಡ -124 ರಬದಲಿಗೆ 125, ಗಣಿತ-94 ರ ಬದಲಿಗೆ 96, ವಿಜ್ಞಾನ-91 ರ ಬದಲಿಗೆ 93, ಇಂಗ್ಲೀಷ್ -88 ರ ಬದಲಿಗೆ 90 ಅಂಕ ಗಳಿಸಿದೆ.

ಲತಾ ಎಚ್.                                 ಗೀತಾ ಎಚ್.

ಇವರಿಬ್ಬರೂ ಅವಳಿ-ಜವಳಿ ವಿದ್ಯಾರ್ಥಿಗಳಾಗಿದ್ದು, ಇತರ ಇಬ್ಬರು ವಿದ್ಯಾರ್ಥಿಗಳು ಕೂಡಾ ಮರು ಮೌಲ್ಯ ಮಾಪನದಿಂದ ಉತ್ತೀರ್ಣಗೊಳ್ಳುವ ಮೂಲಕ ಶಾಲೆಗೆ ಒಟ್ಟು ಶೇ.78.48 ಫಲಿತಾಂಶ ದೊರೆತಿದೆ ಎಂದು ಮುಖ್ಯಶಿಕ್ಷಕ ಸುಧೀರ್ ಜಿ. ತಿಳಿಸಿದ್ದಾರೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...