Thursday, June 26, 2025

ಇಂದು ಗೋಚರಿಸಲಿದೆ ಸ್ಟ್ರಾಬೆರಿ ಚಂದ್ರ ಗ್ರಹಣ

ನವದೆಹಲಿ : ಈ ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ ಸಂಭವಿಸಲಿದ್ದು, ಈ ಬಾರಿ ಸ್ಟ್ರಾಬೆರಿ ಚಂದ್ರಗ್ರಹಣ ಗೋಚರಿಸಲಿದೆ.

ಮೊದಲ ಚಂದ್ರಗ್ರಹಣವು ಜನವರಿ 10ರಂದು ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೆಯ ಚಂದ್ರಗ್ರಹಣ ಜೂನ್‌‌‌ 5 ಹಾಗೂ 6ರ ರಾತ್ರಿ ಸಂಭವಿಸಲಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಚಂದ್ರಗ್ರಹಣವನ್ನು ಪೆನುಂಬ್ರಲ್‌‌ ಎಕ್ಲಿಪ್ಸ್‌‌ ಎಂದು ಹೆಸರಿಸಲಾಗಿದ್ದು, ಇಂದು ಚಂದ್ರನ ಮೇಲ್ಮೈ ಶೇ.75ರಷ್ಟು ಭಾಗವು ಭೂಮಿಯಿಂದ ಭಾಗಶಃ ಮುಚ್ಚಿರುವ ಕಾರಣ ಅದರ ಹೊರಭಾಗದ ನೆರಳು ಮಾತ್ರ ಗೋಚರಿಸುತ್ತದೆ. ಹಾಗಾಗಿ ಪೂರ್ಣಪ್ರಮಾಣದಲ್ಲಿ ಗೋಚರವಾಗಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಬಾರಿ ಸ್ಟ್ರಾಬೆರಿ ಚಂದ್ರಗ್ರಹಣ. ಅಮೆರಿಕದಲ್ಲಿ ಸ್ಟ್ರಾಬೆರಿ ಹಣ್ಣುಗಳ ಸೀಸನ್‌‌ ಆಗಿದ್ದು, ಹಾಗಾಗಿ ಜೂನ್‌‌ ತಿಂಗಳಿನಲ್ಲಿ ಸಂಭವಿಸಲಿರುವ ಪೂರ್ಣ ಚಂದ್ರಗ್ರಹಣಕ್ಕೆ ಸ್ಟ್ರಾಬೆರಿ ಚಂದ್ರಗ್ರಹಣ ಎಂದು ಹೆಸರಿಡಲಾಗಿದೆಯಂತೆ. ಇದೇ ರೀತಿಯಾಗಿ ರೋಸ್‌ ಮೂನ್‌‌‌, ಹಾಟ್‌ ಮೂನ್‌‌‌ ಮುಂತಾದ ಹೆಸರುಗಳನ್ನು ಈಗಾಗಲೇ ಇಡಲಾಗಿದೆ. ಗ್ರಹಣದ ಸಂದರ್ಭ ಚಂದ್ರನು ಭೂಮಿಯ ನೆರಳಿನಲ್ಲಿಯೇ ಪರಿಭ್ರಮಿಸುವ ಕಾರಣದಿಂದ ಛಾಯಾ ಚಂದ್ರಗ್ರಹಣ ಎನ್ನಲಾಗುತ್ತದೆ.
ಇಂದು ರಾತ್ರಿ 11.15ಕ್ಕೆ ಸ್ಟ್ರಾಬೆರಿ ಚಂದ್ರಗ್ರಹಣ ಪ್ರಾರಂಭವಾಗಲಿದ್ದು, ಜೂನ್ 6ರಂದು 12.54ಕ್ಕೆ ಪೂರ್ಣ ಪ್ರಮಾಣದಲ್ಲಿ ಗ್ರಹಣ ಗೋಚರಿಸಲಿದ್ದು, ಜೂನ್ 6ರ ಬೆಳಗ್ಗಿನ ಜಾವ 2.34ಕ್ಕೆ ಪೂರ್ಣಗೊಳ್ಳಲಿದೆ. ಸ್ಟ್ರಾಬೆರಿ ಚಂದ್ರಗ್ರಹಣ ಮೂರು ಗಂಟೆ 18 ನಿಮಿಷಗಳ ಕಾಲದ್ದಾಗಿದೆ ಎಂಬ ಮಾಹಿತಿ ಇದೆ.

ಈ ಚಂದ್ರಗ್ರಹಣವು ದಕ್ಷಿಣ ಅಮೆರಿಕ, ಫೆಸಿಫಿಕ್, ಅಟ್ಲಾಂಟಿಕ್, ಯುರೋಪ್, ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಹಿಂದೂ ಮಹಾಸಾಗರ, ಅಂಟಾರ್ಟಿಕಾ ಭಾಗಗಳಲ್ಲಿ ಗೋಚರಿಸಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದು, ಭಾರತದಾದ್ಯಂತ ಗೋಚರಿಸಲಿದೆ ಎಂದು ತಿಳಿಸಿದ್ದಾರೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...