Thursday, February 13, 2025

ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಸುರತ್ಕಲ್:‌ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಪತ್ತೆಯಾಗಿದೆ.

ಮೃತ ಮಕ್ಕಳನ್ನು ಯಶ್ಚಿತ್‌, ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ, ವಿಶ್ವನಾಥ್ ಅವರ ಪುತ್ರ ನಿರೂಪ, ದೇವದಾಸ್ ಅವರ ಮಗ ಅನ್ವಿತ್‌ ಎಂದು ಗುರುತಿಸಲಾಗಿದೆ.

ಈ ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.

ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದರು.

ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.

ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...