Wednesday, February 12, 2025

ಅಂತರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾದ ಶುಭದಾ ಎಜ್ಯುಕೇಶನಲ್ ಟ್ರಸ್ಟ್ ನಾವುಂದ

ಡಾ| ಎನ್. ಕೆ. ಬಿಲ್ಲವ
ಉಡುಪಿ: ಇತ್ತಿಚೆಗಷ್ಟೇ ರಜತೋತ್ಸವ ಸಂಭ್ರಮಿಸಿದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾವುಂದ ಅಲ್ಲಿನ ಕಿರಿಮಂಜೇಶ್ವರದಲ್ಲಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸಂಚಾಲಕತ್ವದ ಶುಭದಾ ಶೈಕ್ಷಣಿಕ ಸಂಸ್ಥೆಗೆ (ಶುಭದಾ ಎಜ್ಯುಕೇಶನಲ್ ಟ್ರಸ್ಟ್ ನಾವುಂದ) ಈ ಶೈಕ್ಷಣಿಕ ವರ್ಷದಲ್ಲೇ ಗ್ರಾಮೀಣ ಮಕ್ಕಳಿಗೆ ಸರ್ವೋತ್ಕೃಷ್ಟ ಗುಣಮಟ್ಟದ ಶಿಕ್ಷಣ ನೀಡಿರುವುದನ್ನು ಪರಿಗಣಿಸಿ ಅಂತರಾಷ್ಟ್ರೀಯ ಮಟ್ಟದ ‘ಡೈಮಂಡ್ ಆಫ್ ಏಷ್ಯಾ ಇಂಟರ್‌ನ್ಯಾಶನಲ್ ಅವಾರ್ಡ್ ಫಾರ್ ಕ್ವಾಲಿಟಿ ಏಜ್ಯುಕೇಶನ್’ ಪ್ರಶಸ್ತಿಗೆ ಆಯ್ಕೆ ಗೊಳಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಫೆ.14ರ ಗುರುವಾರ ಥೈಲಾಂಡ್ ರಾಷ್ಟ್ರದ ರಾಜಧಾನಿ ಬ್ಯಾಂಕಾಕ್ ಇಲ್ಲಿನ ಹೋಲಿಡೇ ಇನ್ ಹೋಟೇಲ್ ಬ್ಯಾಂಕಾಕ್ ಸಭಾಗೃಹದಲ್ಲಿ ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶುಭದಾ ಶಾಲೆಗಳ ಸಂಸ್ಥಾಪಕ ಡಾ| ಎನ್. ಕೆ. ಬಿಲ್ಲವ ಸ್ವೀಕರಿಸಲಿದ್ದಾರೆ.

ಮುಂಬಯಿನ ಹೆಸರಾಂತ ಯುವೋದ್ಯಮಿ ಆಗಿರುವ ಡಾ| ಎನ್.ಕೆ ಬಿಲ್ಲವ ಶೈಕ್ಷಣಿಕ, ಸಾಮಾಜಿಕ, ಸಹಕಾರಿ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮಾಜ ಸೇವೆಗೈಯುತ್ತಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...