Thursday, January 29, 2026

ಮಕ್ಕಳಿಂದ ಶೋಷಣೆಗೆ ಒಳಗಾಗಿ ಮನೆ ಬಿಟ್ಟು ಬಂದ 81 ವರ್ಷದ ವಯೋವೃದ್ದ : ಕುಕ್ಕೆ ಕ್ಷೇತ್ರದಲ್ಲಿ ಸಮಾಜಸೇವಕ, ಪೊಲೀಸರಿಂದ ರಕ್ಷಣೆ

ಮಕ್ಕಳಿಂದ ಶೋಷಣೆಗೆ ಒಳಗಾದ 81 ವರ್ಷ ಪ್ರಾಯದ ವಯೋವೃದ್ದರು ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕಂಡುಬಂದಿದ್ದು, ಇವರನ್ನು ಪೋಲಿಸರ ಸಮಕ್ಷಮದಲ್ಲಿ ಸಮಾಜಸೇವಕರು ರಕ್ಷಣೆ ಮಾಡಿದ್ದಾರೆ.

ಕಳೆದ ಎಂಟು ದಿನಗಳ ಹಿಂದೆ ಬೆಂಗಳೂರು ಕತ್ರಿಗುಪ್ಪೆಯಿಂದ ಮನೆಬಿಟ್ಟು ಬಂದು ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ತಿರುಗಾಡುತ್ತಿದ್ದರು. ಇಂದು ದೇವಸ್ಥಾನದ ಪರಿಸರದಲ್ಲಿ ಕಂಡುಬಂದ ಇವರನ್ನು ವಿಚಾರಿಸಿದಾಗ ತನ್ನ ಹೆಸರು ಭಕ್ತವತ್ಸಲ ನನಗೆ 81ವರ್ಷ ಪ್ರಾಯ, ಭಾರತೀಯ ಆರ್ಮಿ ಯಲ್ಲಿ 1965 ರಿಂದ 68ರಲ್ಲಿ ಮೂರು ವರ್ಷಗಳ ಕಾಲ ಕರ್ತವ್ಯ ಮಾಡಿದ್ದೇನೆ, ಮನೆಯವರಿಗಾಗಿ ಕೆಲಸವನ್ನು ಅರ್ದದಲ್ಲಿ ಬಿಡಬೇಕಾಗಿ ಬಂದು ನಂತರ ಅನೇಕ ಕಂಪನಿಗಳಲ್ಲಿ ದುಡಿದಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಇಬ್ಬರು ಗಂಡು ಮಕ್ಕಳಿದ್ದು, ಇಬ್ಬರಿಗೂ ಮದುವೆ ಆಗಿದೆ, ಒಬ್ಬ ಪುರೋಹಿತ,ಎರಡನೇ ಮಗ ಡ್ರೈವರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಇಬ್ಬರು ಮಕ್ಕಳಿಗೆ ಅಸ್ತಿಯನ್ನು ಬರೆದು ಕೊಟ್ಟಿದ್ದೇನೆ. ಇವಾಗ ಏನೂ ಇಲ್ಲ. ನನ್ನ ಎರಡನೇ ಮಗನ ಹೆಂಡತಿ ನನಗೆ ತೊಂದರೆ ಮಾಡುತಿದ್ದರೆ. ಅವರು ಹೇಳಿದ ಹಾಗೆ ನಾನು ಕೇಳಬೇಕು ಹೇಳುತ್ತಾರೆ, ಅದು ನನಗೆ ಇಷ್ಟ ಇಲ್ಲ ಅದಕ್ಕೆ ಮನೆಬಿಟ್ಟು ಇಲ್ಲಿಗೆ ಬಂದೆ. ಇಲ್ಲಿ ಊಟ ಸಿಕ್ರೆ ಕೊಡಿ ಇಲ್ಲಾಂದ್ರೆ ಬೇಡ ಎಂದು ಹೇಳಿದ್ದಾರೆ.

ಹಗಲಿಡೀ ಸುತ್ತಾಡುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಅವರ ಗಮನಕ್ಕೆ ತಂದಿದ್ದಾರೆ ಹಾಗೂ ವಿಷಯ ತಿಳಿದು ರವಿಕಕ್ಕೇಪದವು ಅವರು ಸಮಾಜಸೇವಕ ಟ್ರಸ್ಟ್ ವತಿಯಿಂದ ರಕ್ಷಣೆ ಮಾಡಿ ಅವರ ಮಕ್ಕಳಿಗೆ ಫೋನ್ ಮಾಡಿ ತಂದೆಯನ್ನು ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ.

ಆದರೇ ವೃದ್ದ ಭಕ್ತವತ್ಸಲ ಮಾತ್ರ ಮನೆಗೆ ತೆರಳಲು ನಿರಾಕರಿಸಿದ್ದು ಸೊಸೆಯಿಂದ ಹಿಂಸೆ ಆಗುತ್ತಿದ್ದು, ಮನೆಗೆ ಹೋಗಲು ಮನಸ್ಸಿಲ್ಲ ಇಲ್ಲಿಯೇ ಇರುತ್ತೇನೆ ಎಂದು ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮದ ಜೊತೆ ಮಾತಾಡಿದ ಸಮಾಜಸೇವಕ ಡಾ. ರವಿಕಕ್ಕೆಪದವು ಅವರು ತಂದೆ ತಾಯಿ ಮಕ್ಕಳನ್ನು ಪ್ರೀತಿಯಿಂದ ನೋಡಿರುತ್ತಾರೆ. ವಯಸ್ಸು ಆದಮೇಲೆ ಮಕ್ಕಳು ತಂದೆ ತಾಯಿಯನ್ನು ನೋಡಿಕೊಳ್ಳಬೇಕು, ಮಕ್ಕಳು ಹಿರಿ ಜೀವದ ನಿರ್ಲ್ಯಕ್ಷದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

 

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...