Wednesday, February 12, 2025

ತಂದೆ ಮಗನ‌ ಗಲಾಟೆಗೆ ಆತ್ಮಹತ್ಯೆ ಮಾಡಿಕೊಂಡ ಮನೆಯೊಡತಿ

ಬಂಟ್ವಾಳ: ತಂದೆ ಮಗನ ಗಲಾಟೆ ನೋಡಲಾರದೆ ಮನೆಯೊಡತಿ ಆತ್ಮಹತ್ಯೆ ಮಾಡಿದ ಘಟನೆ ತಣ್ಣೀರು ಪಂತ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ ರಾಜೀವ ಪೂಜಾರಿ ಅವರ ಪತ್ನಿ ಚಂದ್ರಾವತಿ (55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ರಾಜೀವ ಪೂಜಾರಿ ಅವರಿಗೆ ನಾಲ್ವರು ಮಕ್ಕಳು, ಅವರಲ್ಲಿ ಕೊನೆಯ ಮಗ ನವೀನ್ ತಂದೆ ತಾಯಿಯ ಜೊತೆ ವಾಸವಾಗಿದ್ದ, ಇತ್ತೀಚಿನ ದಿನಗಳಲ್ಲಿ ತಂದೆ ಮತ್ತು ಮಗನಿಗೆ ನಿತ್ಯ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ನಡೆಯುತ್ತಿದ್ದು, ಇವತ್ತು ಕೂಡಾ ಮಧ್ಯಾಹ್ನ ದ ವೇಳೆ ಗಲಾಟೆ ನಡೆಯಿತು.
ದಿನಾ ಇವರ ಗಲಾಟೆ ನೋಡಿ ನೋಡಿ ಸಹಿಸಲಾಗದ ಚಂದ್ರವಾತಿ ಇವರ ಗಲಾಟೆ ನಡೆಯುತ್ತಿದ್ದಂತೆ ದನ ಕಟ್ಟುವ ಹಗ್ಗವನ್ನು ಹಿಡಿದುಕೊಂಡು ಹೋಗಿ ಅಲ್ಲೇ ಸಮೀಪದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...