ಪುತ್ತೂರು : ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರಂದು ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎಂದು ಗುರುತಿಸಲಾಗಿದೆ.
20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ, ಕೆಲಸಕ್ಕೂ ಹೋಗದೆ ಮನೆಯಲ್ಲೇ ಇರುತ್ತಿದ್ದರು. ಜೂನ್ 10 ಬುಧವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ನಾಪತ್ತೆಯಾಗಿದ್ದರು. ಅವರ ಮೊಬೈಲ್ಗೆ ಮನೆಮಂದಿ ಕರೆ ಮಾಡಿದ ಸಂದರ್ಭ ತೋಟದ ಕೆರಯ ಬಳಿ ಮೊಬೈಲ್ ರಿಂಗ್ ಆಗಿದ್ದು, ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಮೃತದೇಹ ಕಂಡುಬಂದಿದೆ.
ಸೇಸಪ್ಪ ಕುಲಾಲ್ ಅವರು ಮಕ್ಕಳ ಮೇಲೆ ದೂರು ನೀಡಿದ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ಕಮಲಾ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

